Share this news

ಕಾರ್ಕಳ : ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ಮುರಿದು ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಮಾಳ ಗ್ರಾಮದ ನಿವಾಸಿ ತಂಗಚ್ಚನ್‌ ಮಗ ಸಂತೋಷ್‌ ಟಿ. ಎಂದು ಗುರುತಿಸಲಾಗಿದೆ.

ಗುರ್ಗಾಲ್‌ ಗುಡ್ಡೆಯ ಮನೆಯಲ್ಲಿ ಆ. 30 ರಂದು ಮನೆ ಬಾಗಿಲು ಮುರಿದು ಬೆಡ್‌ ರೂಂನ ಲಾಕರ್‌ ನಲ್ಲಿದ್ದ 33 ಪವನ್ ಮೌಲ್ಯದ ವಿವಿಧ ರೀತಿಯ ಚಿನ್ನಾಭರಣ ಕಳವಾಗಿತ್ತು. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು 33 ಪವನ್ ಚಿನ್ನಾಭರಣ ಸಹಿತ ಕೃತ್ಯಕ್ಕೆ ಬಳಸಿದ್ದ ಬೈಕ್‌ ಅನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣಾ ಪಿಎಸ್‌ಐ ದಿಲೀಪ್ ಜಿ. ಆರ್., ತನಿಖಾ ವಿಭಾಗದ ಪಿ.ಎಸ್.ಐ. ಸುಂದರ ಹಾಗೂ ಸಿಬ್ಬಂದಿ ಮಹಾಂತೇಶ್, ಪ್ರಶಾಂತ್ ಕೆ., ವಿಶ್ವನಾಥ, ಶಶಿಕುಮಾರ್, ನಾಗರಾಜ, ಗೋವಿಂದ ಆಚಾರಿ ರಾಘವೇಂದ್ರ, ಅಶೋಕ ಉಪಸ್ಥಿತರಿದ್ದರು.

                        

                          

                        

                       

Leave a Reply

Your email address will not be published. Required fields are marked *