Share this news

ಕುಂದಾಪುರ: ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು ಸಿಕ್ಕಿದ್ದಕ್ಕೆ ಬೇಸರಗೊಂಡ ವಿದ್ಯಾರ್ಥಿಯೊಬ್ಬ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕುಂದಾಪುರ ತಾಲೂಕಿನ ಹಳ್ಳಾಡು ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಶಿವಪ್ರಸಾದ್ ಶೆಟ್ಟಿ ಎಂಬುವರ ಮಗ ಸುಪ್ರಜ್ ಶೆಟ್ಟಿ(17) ಎಂದು ಗುರುತಿಸಲಾಗಿದೆ.

ಕುಂದಾಪುರದ ಖಾಸಗಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಪಿಯು ವಿದ್ಯಾಭ್ಯಾಸ ಮಾಡಿದ್ದ ಸುಪ್ರಜ್ ಶೆಟ್ಟಿಗೆ ಮೆಡಿಕಲ್ ಓದುವ ಆಸೆಯಿತ್ತು. ಆದರೆ ಆತನಿಗೆ ಬೆಂಗಳೂರಿನಲ್ಲಿ ಇಂಜಿನಿಯರ್ ಸೀಟ್ ದೊರಕಿತ್ತು. ಇದು ಆತನಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಆತನ ಮನೆಯವರು ಮಗನಿಗೆ ಬುದ್ದಿವಾದ ಹೇಳಿ ಬೆಂಗಳೂರಿಗೆ ಕಳುಹಿಸಲು ಬಟ್ಟೆಬರೆಗಳನ್ನು ಪ್ಯಾಕ್ ಮಾಡಿದ್ದರು. ಎಲ್ಲವೂ ಸರಿಯಾಗಿದ್ದರೆ ಗುರುವಾರ ಆತ ಬೆಂಗಳೂರಿಗೆ ಹೊರಡಬೇಕಿತ್ತು.

ಆದರೆ ಬುಧವಾರ ಸಂಜೆ ಹಲ್ನಾಡು ಮನೆಯ ಸಮೀಪದ ಹೊಳೆಯ ಬದಿಯಲ್ಲಿ ತನ್ನ ಚಪ್ಪಲಿ ಮತ್ತು ಮೊಬೈಲ್ ಬಿಟ್ಟಿರುವುದು ಕಂಡು ಬಂದಿದೆ. ಇದರಿಂದ ಅನುಮಾನಗೊಂಡ ಮನೆಯವರು ಹಾಗೂ ಸ್ಥಳೀಯತು ಹುಡುಕಾಟ ನಡೆಸಿದ್ದರೂ ಪ್ರಯೋಜನವಾಗಿರಲಿಲ್ಲ.

ಗುರುವಾರ ಮಧ್ಯಾಹ್ನ ಬಾಲಕನ ಮೃತದೇಹ ಅದೇ ಹೊಳೆಯಲ್ಲಿ ಪತ್ತೆಯಾಗಿದೆ. ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

                        

                          

                        

                       

Leave a Reply

Your email address will not be published. Required fields are marked *