Share this news

ಮಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯಪಾಲರ ಆದೇಶ ಸರಿ ಎಂದು ತೀರ್ಪು ನೀಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಕೂಡ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಈ ಕುರಿತು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಹಿಂದೆ ರೈಲ್ವೆ ಸಚಿವರಾಗಿದ್ದಾಗ ಲಾಲ್ ಬಹದ್ದೂರ್ ಶಾಸ್ತ್ರಿ ಅಪಘಾತ ಮಾಡಿದಾಗ ರಾಜೀನಾಮೆ ನೀಡಿದ್ದರು. ರಾಜೀನಾಮೆ ಕೊಡಬೇಕೋ, ಕೊಡಬೇಡವೋ ಅನ್ನೋದು ಅವರಿಗೆ ಬಿಟ್ಟಿದ್ದು. ಇಂತಹ ಗಂಭೀರ ಆರೋಪ ಕೇಳಿಬಂದಾಗ ರಾಜೀನಾಮೆ ಕೊಡಬೇಕು. ಒಂದು ವೇಳೆ ರಾಜೀನಾಮೆ ಕೊಡದಿದ್ದರೆ ಕಾನೂನಿನಲ್ಲಿ ಯಾವುದೇ ತಪ್ಪಿಲ್ಲ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ನನಗೆ ಅನಿಸಿದಾಗ ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ.

ರಾಜೀನಾಮೆ ಕೊಡುವುದು ಸಿದ್ದರಾಮಯ್ಯಗೆ ಬಿಟ್ಟದ್ದು. ಯಾವ ತನಿಖಾ ಸಮಿತಿ ಉತ್ತಮವೆಂದು ಹೇಳಲ್ಲ, ಸರ್ಕಾರಕ್ಕೆ ಬಿಟ್ಟ ವಿಚಾರ. ಯಾವುದೇ ತನಿಖಾ ಸಮಿತಿ ವಿಚಾರಣೆ ಮಾಡಬಹುದು. ಅವರು ಆರೋಪಿಯಲ್ಲವೆಂದು ತೀರ್ಪು ಬಂದರೆ ಮತ್ತೆ ಹುದ್ದೆ ಅಲಂಕರಿಸಲಿ. ಹೈಕೋರ್ಟ್ ತೀರ್ಪಿಗೂ ಮುನ್ನ ನಾನು ತಪ್ಪೇ ಮಾಡಿಲ್ಲವೆಂದು ಹೇಳಿದ್ದರು. ಈಗ ಕೋರ್ಟ್ ಮೇಲ್ನೋಟಕ್ಕೆ ತಪ್ಪು ಕಂಡುಬಂದಿದೆ ಎಂದು ಹೇಳಿದೆ. ಸದ್ಯ ಅವರು ಹೇಳಿದ್ದು ಸರಿಯಿಲ್ಲವೆಂದು ಆಯ್ತಲ್ಲ ಎಂದಿದ್ದಾರೆ.

                       in 

Leave a Reply

Your email address will not be published. Required fields are marked *