ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ನನ್ನು ಮನೆಯಲ್ಲಿ ಕೂಡಿ ಹಾಕಿ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು, ಬಲ್ನಾಡು ಗ್ರಾಮದ ಉಜಿರ್ಪಾದೆ ನಿವಾಸಿ ಶ್ರೀಮತಿ ಕೀರ್ತಿ ಅಖಿಲೇಶ್ ಪುತ್ತೂರು ಕೋರ್ಟ್ ರಸ್ತೆಯ ಎಸ್.ಬಿ.ಐ ಬ್ಯಾಂಕ್ ನಿಂದ 2 ಕೋಟಿ ಸಾಲ ಪಡೆದಿದ್ದು, ಸಾಲ ಮರುಪಾವತಿಸದೆ NPA ಆಗಿದ್ದರು.
ಕೀರ್ತಿ ಅಖಿಲೇಶ್ ರವರ ಪತಿ ಅಖಿಲೇಶ್ ಸಾಲ ಕೇಳಲು ಹೋದ ಮ್ಯಾನೇಜರ್ನನ್ನು ಮನೆಯಲ್ಲಿ ಕೂಡಿ ಹಾಕಿ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪಿಯಾಗಿದ್ದಾನೆ. ಕೀರ್ತಿ ಅಖಿಲೇಶ್ ರವರಿಗೆ ಬ್ಯಾಂಕ್ ಮ್ಯಾನೇಜರ್ ಹಲವು ಬಾರಿ ವಕೀಲರ ಮೂಲಕ ನೋಟೀಸ್ ಕಳಿಸಿದ್ದರು. ಈ ಸಂಬಂಧ ಮೇಲಾಧಿಕಾರಿಗಳ ಆದೇಶದಂತೆ ಅಖಿಲೇಶ್ ಮನೆಗೆ ಬ್ಯಾಂಕ್ ಮ್ಯಾನೇಜರ್ ತೆರಳಿದ್ದಾರೆ. ಮನೆಗೆ ಬಂದ ಹಿನ್ನಲೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳಿಗೆ ಜೀವ ಬೆದರಿಕೆ ಹಾಕಿ ಮನೆಯಲ್ಲಿದ್ದ ಪಿಸ್ತೂಲ್ ನಿಂದ ಕೊಲೆ ಮಾಡುವ ಬೆದರಿಕೆ ಹಾಕಿದ್ದಾರೆ.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
in