ಉಡುಪಿ: ಕಾರೊಂದು ಬ್ರೇಕ್ ಫೇಲಾಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬುಧವಾರ ನಡೆದಿದೆ.
ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಮೃತ ದುರ್ದೈವಿ.
ಇಂದ್ರಾಳಿ ದೇವಸ್ಥಾನದಿಂದ ಕಡೆಯಿಂದ ಇಳಿಜಾರಿನಲ್ಲಿ ವೇಗವಾಗಿ ಬರುತ್ತಿದ್ದ ಕಾರು ಬ್ರೇಕ್ ಫೇಲ್ ಆಗಿದ್ದು, ಎರಡೂ ಬದಿಯಲ್ಲಿದ್ದ ವಾಹನಗಳು ಸಹಿತ ಜನರಿಗೆ ಕಾರು ಢಿಕ್ಕಿ ಹೊಡೆದಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ದೀಪೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೆಲವು ಮಂದಿ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ