ಕಾರ್ಕಳ: ಕಾರ್ಕಳ ತಾಲೂಕು ದಂಡಾಧಿಕಾರಿ ಹಾಗೂ ತಹಶಿಲ್ದಾರ್ ಆಗಿ ಬೈಂದೂರು ತಾಲೂಕು ತಹಶಿಲ್ದಾರ್ ಆಗಿರುವ ಪ್ರದೀಪ್ ಆರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಕಾಪು ತಹಶಿಲ್ದಾರ್ ಪ್ರತಿಭಾ ಅವರು ಪ್ರಸ್ತುತ ಕಾರ್ಕಳ ತಹಶಿಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರದೀಪ್ ಅವರು ಸೋಮವಾರ ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ.