ಕಾರ್ಕಳ: ಉಡುಪಿಯ ಸೇಂಟ್ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತರ ಜತೆ ಕಾರ್ಕಳ ತಾಲೂಕಿನ ದುರ್ಗ ಗ್ರಾಮದ ದುರ್ಗ ಫಾಲ್ಸ್ಗೆ ಪಿಕ್ನಿಕ್ ಗೆ ಬಂದಿದ್ದ ವೇಳೆ ಆತ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾನೆ.
ನ.28ರಂದು ಗುರುವಾರ ಈ ದುರಂತ ಸಂಭವಿಸಿದ್ದು, ಮಿಲಾಗ್ರಿಸ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಗ್ಲಾಸನ್ ಜೋಯ್ ಡಯಾಸ್(19) ಎಂಬಾತ ಮೃತಪಟ್ಟ ವಿದ್ಯಾರ್ಥಿ. ಮೃತ ಜೋಯೆಲ್ ಡಯಾಸ್ ಹಾಗೂ ಇತರೇ 6 ಮಂದಿ ವಿದ್ಯಾರ್ಥಿಗಳು ಶಾಲೆಗೆ ಚಕ್ಕರ್ ಹೊಡೆದು ತಮ್ಮ ಬೈಕುಗಳಲ್ಲಿ ಮೋಜು ಮಾಡುವ ಸಲುವಾಗಿ ದುರ್ಗ ಫಾಲ್ಸ್ ಗೆ ಬಂದಿದ್ದರು. ರಭಸವಾಗಿ ಧುಮ್ಮಿಕ್ಕಿ ಹರಿಯುವ ನೀರಿನಲ್ಲಿ ಆಟವಾಡಲು ಹೋದ ಜೋಯೆಲ್ ಏಕಾಎಕಿ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದರೂ ಉಳಿದ ವಿದ್ಯಾರ್ಥಿಗಳಿಗೆ ಈಜು ಬಾರದ ಕಾರಣದಿಂದ ಜೋಯೆಲ್ ನೀರಿನಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾನೆ. ಇದಲ್ಲದೇ ವಾರದ ಮಧ್ಯೆ ಪ್ರವಾಸಿಗರು ಇಲ್ಲದ ಹಿನ್ನಲೆಯಲ್ಲಿ ರಕ್ಷಿಸಲೂ ಯಾರೂ ಇಲ್ಲದೇ ದುರಂತ ನಡೆದುಹೋಗಿದೆ. ಜೋಯೆಲ್ ಶವಕ್ಕಾಗಿ ಅಗ್ನಿ ಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೃತದೇಹ ಮೇಲಕ್ಕೆತ್ತಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಡೆಡ್ಲಿ ಸ್ಪಾಟ್ ದುರ್ಗ ಫಾಲ್ಸ್: ಪೋಷಕರೇ ನಿಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಿ!
ಬಹುತೇಕ ಜಲಪಾತಗಳು ಅಪಾಯಕಾರಿಯಾಗಿದ್ದರೂ ಕಾರ್ಕಳದ ದುರ್ಗ ಫಾಲ್ಸ್ ಅತ್ಯಂತ ಅಪಾಯಕಾರಿಯಾಗಿದೆ. ವೇಗವಾಗಿ ಹರಿಯುವ ನೀರು ಜತೆಗೆ ಜಾರುವ ಬಂಡೆಕಲ್ಲುಗಳು ಪ್ರವಾಸಿಗರಿಗೆ ಮೃತ್ಯುಕೂಪವಾಗಿ ಪರಿಣಮಿಸುತ್ತಿವೆ.ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದರೆ ಕೆಲವು ಪುಂಡ ವಿದ್ಯಾರ್ಥಿಗಳ ಜತೆ ಸೇರಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ಸಾಕಷ್ಟು ಘಟನೆಗಳು ನಡೆಯುತ್ತಿವೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ಕುರಿತು ಎಚ್ಚರಿಕೆ ವಹಿಸಬೇಕಿದೆ.



































































ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
































































































ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.


































































































































































ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
































































































ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.
































































































