ಉಡುಪಿ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನಗೆಳ ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆಯಾಗಿದ್ದಾರೆ.
ಸಮಿತಿಯ ಸದಸ್ಯರಾಗಿ ಶಬರೀಶ್ ಸುವರ್ಣ, ಉಸ್ತಾದ್ ಸಾದಿಕ್, ಡಾ| ಸಂತೋಷ್ ಕುಮಾರ್, ದಿನೇಶ್ ಜತ್ತನ್ನ, ಪ್ರವೀಣ್ ಕುಮಾರ್ ಹೆಗ್ಡೆ, ಸಂತೋಷ್ ಶೆಟ್ಟಿ, ಮಾಲತಿ ಆಚಾರ್ಯ, ಸುಧಾಕರ್ ಪೂಜಾರಿ, ದಿನೇಶ್ ಪೂಜಾರಿ, ಪ್ರೇಮಲತಾ ಸೋನ್ಸ್, ಗಣೇಶ್ ಶೆಟ್ಟಿಬೆಟ್ಟು, ವಿಜಯ್ ನಾಯ್ಕ್ ಹಾಗೂ ಅರ್ಚನಾ ದೇವಾಡಿಗ ಆಯ್ಕೆಯಾಗಿದ್ದಾರೆ.
ಸಮಿತಿ ಕಚೇರಿಯ ಉದ್ಘಾಟನೆ ನ.30ರಂದು ಸಂಜೆ 3ಕ್ಕೆ ತಾ.ಪಂ.ಕಟ್ಟಡದ ಮೊದಲನೇ ಮಹಡಿಯಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿ’ಸೋಜಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಲಾವಣ್ಯಾ ಬಲ್ಲಾಳ್, ಕಾಂಗ್ರೆಸ್ ನಾಯಕರಾದ ಎಂ.ಎ.ಗಫೂರ್, ಪ್ರಸಾದ್ರಾಜ್ ಕಾಂಚನ್, ಮುನಿಯಾಲು ಉದಯ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಸಂತೋಷ್ ಕುಲಾಲ್, ಗೀತಾ ವಾಗ್ಲೆ, ಮಮತಾ ಶೆಟ್ಟಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



































































ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
































































































ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.


































































































































































ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
































































































ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.
































































































