Share this news

 

ಕಾರ್ಕಳ : ಜನರ ಮೂಗಿಗೆ ತುಪ್ಪ ಸವರುವ ಪೊಳ್ಳು ಯೋಜನೆಗಳು, ಅವೈಜ್ಞಾನಿಕ ನೀತಿಯಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹೀನಾಯ ಸ್ಥಿತಿಗೆ ತಲುಪಿದೆ, ಹೆಸರಿಗಷ್ಟೆ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸುವ ಅನಿವಾರ್ಯವಾಗಿದೆ ಎಂದು ಶಾಸಕÀ ವಿ ಸುನಿಲ್ ಕುಮಾರ್ ಹೇಳಿದ್ದಾರೆ.
ಅವರು ಕಾರ್ಕಳದ ವಿಕಾಸ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಹಾಲು, ಪೆಟ್ರೋಲ್, ಡಿಸೇಲ್, ಬಸ್ ದರ, ರೈತರ ಪಹಣಿ, ವಿದ್ಯುತ್ ದರ, ಅಬಕಾರಿ, ಸರಕಾರಿ ಪ್ರಮಾಣ ಪತ್ರ, ದತ್ತು ಡೀಡ್ ಹೀಗೆ ಎಲ್ಲಾ ವಿಭಾಗಗಳಲ್ಲೂ ನಿರಂತರವಾಗಿ ಬೆಲೆ ಏರಿಕೆಯಾಗಿದೆ.
ಬಡ ಕುಟುಂಬಗಳು ವಿದ್ಯಾಭ್ಯಾಸ ಹಾಗೂ ಆರೋಗ್ಯ ಭದ್ರತೆ ದೃಷ್ಟಿಯಲ್ಲಿ ಅನುಕೂಲವಾಗುತ್ತಿದ ಅನೇಕ ಬಿಪಿಎಲ್ ಕಾರ್ಡುಗಳನ್ನು ವಿವಿಧ ನೆಪಗಳನ್ನು ನೀಡಿ ಕಾಂಗ್ರೆಸ್ ರದ್ದು ಮಾಡುತ್ತಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ಸುಮಾರು 7 ಸಾವಿರಕ್ಕೂ ಅಧಿಕ ಬಿ.ಪಿ.ಎಲ್. ಕಾರ್ಡ್ಗಳನ್ನು ರದ್ದುಗೊಳಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಇದರಲ್ಲಿ ಈಗಾಗಲೇ ಅನೇಕ ಬಿ.ಪಿ.ಎಲ್. ಕಾರ್ಡ್ ಗಳನ್ನು ರದ್ದುಗೊಳಿಸಿದ್ದಾರೆ.
ಯಾವುದೇ ರೀತಿಯ ಅಭಿವೃದ್ಧಿಗೆ ಅನುದಾನವಿಲ್ಲ, ಅಕ್ರಮ ಸಕ್ರಮ ಅರ್ಜಿ ತಿರಸ್ಕೃತ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಸಿಗುವ ಕೆಂಪುಕಲ್ಲು ಹಾಗೂ ಮರಳು ಪೂರೈಕೆಗೆ ಸರಿಯಾದ ನೀತಿಗಳನ್ನು ಮಾಡದೇ ಎಲ್ಲದಕ್ಕೂ ತಡೆ, ಹೀಗೆ ಎಲ್ಲಾ ರೀತಿಯಿಂದಲೂ ಜನರನ್ನು ದರೋಡೆ ಮಾಡುತ್ತಿರುವ, ಕರ್ನಾಟಕವನ್ನು ದಿವಾಳಿ ಮಾಡುತ್ತಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಭಷ್ಟತೆಯ ವಿರುದ್ಧ ರಾಜ್ಯದ ಜನೆತೆ ಹೋರಾಟ ನಡೆಸುವ ಅನಿವಾರ್ಯತೆಯಿದೆ ಎಂದು ಗುಡುಗಿದ್ದಾರೆ.
ಈ ಸಂದರ್ಭದಲ್ಲಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಜಯರಾಮ್ ಸಾಲ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬೋಳ ಸತೀಶ್ ಪೂಜಾರಿ ಸ್ವಾಗತಿಸಿ, ಶಿವಪುರ ಸುರೇಶ್ ಶೆಟ್ಟಿ ಧನ್ಯವಾದವಿತ್ತರು. ಪಳ್ಳಿ ಗ್ರಾಮ ಪಂಚಾಯತ್ ಸದಸ್ಯ ಶ್ರೀಕಾಂತ್ ಕಾರ್ಯಕ್ರಮ ನಿರೂಪಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *