ಕಾರ್ಕಳ : ಕಾರ್ಕಳದ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಸೋಮವಾರ ಸಂಜೆ ವಿದ್ಯತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಕಂಬದ ಮೇಲೆ ತೆಂಗಿನ ಮರವೊಂದು ಬಿದ್ದ ಕಾರಣ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ.
ಕೂಡಲೇ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ದಾವಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

