ತೀರ್ಥಹಳ್ಳಿ: ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಫೆ. 26ರ ಬುಧವಾರ ನಡೆದಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ಐ.ಸಿ.ಎಸ್.ಸಿ.) ಶಾಲೆಯ ಐಸಿರಿ (14 ವ) ಮೃತಪಟ್ಟ ವಿದ್ಯಾರ್ಥಿನಿ.
ಹೆಗ್ಗೋಡಿನ ಐಸಿರಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲ ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಈಕೆಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ.
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಕಾಲಿಕ ನಿಧನಕ್ಕೆ ಸಹ್ಯಾದ್ರಿ ಶಾಲಾ ಶಿಕ್ಷಣ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.
