ಕಾರ್ಕಳ: ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಭಾರಿ ಮಂಡಿಸಿರುವ 4,08,549 ಕೋಟಿ ರೂ. ವೆಚ್ಚದ ಬಜೆಟ್ ಅತ್ಯುತ್ತಮ ಬಜೆಟ್ ಆಗಿದೆ. ಈ ಬಜೆಟ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿ ಸರಕಾರ ದಿವಳಿಯಾಗಿದೆ ಎಂದು ಗುಲ್ಲೆಬ್ಬಿಸಿದ ವಿಪಕ್ಷಗಳಿಗೆ ನೀಡಿದ ಸಮರ್ಪಕ ಉತ್ತವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್ ಹೇಳಿದ್ದಾರೆ. ರಾಜ್ಯ ಬಜೆಟ್ ವಿತ್ತೀಯ ಶಿಸ್ತು ಪಾಲನೆಯ ಬಜೆಟ್, ಸಮಾಜದ ಆರ್ಥಿಕ ಸಮಾನತೆ, ಸಾಮಾಜಿಕ ಸೌಹಾರ್ದತೆ ಮತ್ತು ಸರ್ವಾಂಗೀಣ ಅಭಿವೃದ್ಧಿ ಮತ್ತು ಮಹಿಳೆ ಮಕ್ಕಳು ಕೂಲಿ ಕಾರ್ಮಿಕರ ಪರ ಒಲವುಳ್ಳ ಬಜೆಟ್ ಇದಾಗಿದೆ ಎಂದಿದ್ದಾರೆ.
ಪ್ರತೀ ವಿಧಾನಸಭಾ ಕ್ಷೇತ್ರಗಳ ಮೂಲ ಸೌಲಭ್ಯ ಅಭಿವೃದ್ದಿಗಾಗಿ ಪ್ರತೀ ಕ್ಷೇತ್ರಗಳಿಗೆ 8 ಸಾವಿರ ಕೋ.ರೂ ಮೀಸಲು, ಮಹಿಳೆಯರ ಸಾಮಾಜಿಕ ಅಭ್ಯುದಯದ ಗುರಿಯೊಂದಿಗೆ ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗೆ 94084 ಕೋ.ರೂ, ಮಕ್ಕಳ ಸಮಗ್ರ ಕ್ಷೇಮ ಸಾಧನೆಯ ಗುರಿಯೊಂದಿಗಿನ ಯೋಜನೆಗಳಿಗೆ 42033 ಕೋ.ರೂ ಮೀಸಲಿಟ್ಟಿರುವುದು ಸ್ವಾಗತಾರ್ಹ. ಧಾರ್ಮಿಕ ಧತ್ತಿ ಇಲಾಖಾ ದೇಣಿಗೆ ದೇವಸ್ಥಾನಗಳ ಅರ್ಚಕರ ತಸ್ತಿಕ್ ಹಣವನ್ನು ವಾರ್ಷಿಕ 60 ಸಾವಿರ ರೂ.ನಿಂದ 72 ಸಾವಿರಕ್ಕೆ ಏರಿಕೆ, ಅಂಗನವಾಡಿ ಮತ್ತು ಅಡುಗೆ ಸಹಾಯಕಿಯರಿಗೆ ಕ್ರಮವಾಗಿ 1000 ಮತ್ತು 750 ರೂ. ಹೆಚ್ಚುವರಿ ಹಾಗೂ ರೈತ ಕುಟುಂಬಗಳ ಜಾನುವಾರುಗಳ ಅಕಸ್ಮಿಕ ಸಾವಿಗೆ ಅನುಗ್ರಹ ಯೋಜನೆಯಡಿ ಪರಿಹಾರದಲಿಯೂ ಏರಿಕೆಯೇ ಮೊದಲಾದ ಯೋಜನಗಳು ಗ್ರಾಮೀಣ ಪರಿಸರದ ವರ್ಗದಲ್ಲಿ ಸಂತಸದಂದಿದೆ ಎಂದ
ಮತ್ತೆ ಈ ಬಾರಿಯ ಬಜೆಟಿನಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಟಾನಕ್ಕೆ 51,300ಕೋ.ರೂ. ಮೀಸಲಿಟ್ಟಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರಕಾರ ತನ್ನ ಆಡಳಿತದ ಅವಧಿಯಲ್ಲಿ ವಿತ್ತೀಯ ಶಿಸ್ತು ಪಾಲನೆಯ ಮೂಲಕ ರಾಜ್ಯದ ಅಭಿವೃದ್ಧಿಯನ್ನು ಎತ್ತಿ ಹಿಡಿದಿರುವುದರಿಂದ ಇದು ಸಾಧ್ಯವಾಗಿದೆ. ಕೇಂದ್ರ ಸರಕಾರ ರಾಜ್ಯಕ್ಕೇ ನೀಡಬೇಕಾದ ತೆರಿಗೆ ಹಣ ಕಡಿತದ ಹೊರತಾಗಿಯೂ ಒಟ್ಟು ಜಿಡಿಪಿ 8.4ಕ್ಕೆ ದೇಣಿಗೆಯೆಂಬಂತೆ ರಾಜ್ಯ ಸರಕಾರ ತನ್ನ “ರಾಜ್ಯ ರಾಷ್ಟ್ರೀಯ ಉತ್ಪನ್ನವನ್ನು 7.4 ರ ಪಥಕ್ಕೆ ತಂದು ನಿಲ್ಲಿಸಿರುವುದು ಸರಕಾರದ ಸಾಧನೆಗೆ ಸಾಕ್ಷಿಯಾಗಿದೆ ಎಂದು ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

K