ಮೂಡುಬಿದಿರೆ : ಸಂಜೆ ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ನಿರ್ಜನ ಪ್ರದೇಶದಲ್ಲಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ಆರೋಪಿಯನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್ ಎಂದು ಗುರುತಿಸಲಾಗಿದೆ.
ಮಾರ್ಚ್ 8ರಂದು ಸಂಜೆ ಟ್ಯೂಷನ್ ಮುಗಿಸಿ ಸೈಕಲ್ನಲ್ಲಿ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ಆರೋಪಿ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗಿದ್ದಾನೆ. ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡಗಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಬಾಲಕಿ ಆತನಿಂದ ತಪ್ಪಿಸಿಕೊಂಡು ಸೈಕಲ್ ಅಲ್ಲೇ ಬಿಟ್ಟು, ಮನೆಗೆ ಓಡಿ ಹೋಗಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ ಎನ್ನಲಾಗಿದೆ.
ಘಟನೆಯ ಬಳಿಕ ಆರೋಪಿಯು ಅಲ್ಲಿಂದ ಪರಾರಿಯಾಡಿದ್ದಾನೆ. ಈ ಬಗ್ಗೆ ಬಾಲಕಿಯ ಮನೆಯವರು ದೂರು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
K