ಕಾರ್ಕಳ :ಚರ್ಚಿನಲ್ಲಿ ಪ್ರಾರ್ಥನೆ ಮುಗಿಸಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಚರ್ಚ್ ಬಳಿ ಭಾನುವಾರ ಸಂಭವಿಸಿದೆ.
ಕಾರ್ಕಳ ಮಂಗಳಪಾದೆಯ ಮೇರಿ ವಾಝ್ (70) ಎಂಬವರು ಮೃತಪಟ್ಟ ಮಹಿಳೆ.ಅವರು ಮಿಯ್ಯಾರು ಚರ್ಚ್ ನಿಂದ ಭಾನುವಾರದ ಪ್ರಾರ್ಥನೆ ಮುಗಿಸಿ ವಾಪಸ್ಸಾಗಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಈ ಅಪಘಾತದಲ್ಲಿ
ಬೈಕ್ ಸವಾರ ಮಿಯ್ಯಾರಿನ ಸಂತೋಷ್ ಅವರಿಗೂ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
K