Share this news

 

 

 

ಕಾರ್ಕಳ: ಕಾರ್ಕಳ ತಾಲೂಕಿನ ಎರಡು ಕಡೆಗಳಲ್ಲಿ ಲಾರಿ ಮತ್ತು ಬಸ್ಸಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರ ಪರಿಣಾಮ ವಾಹನಗಳು ಜಖಂಗೊAಡು ಸಾವಿರಾರು ರೂ. ನಷ್ಟ ಸಂಭವಿಸಿದೆ.

ಉಡುಪಿಯ ಮಲ್ಪೆ ಬಂದರಿನಲ್ಲಿ ಲಾರಿಯಲ್ಲಿ ಮೀನು ಲೋಡು ಮಾಡಿಕೊಂಡು ತಮಿಳುನಾಡಿಗೆ ಹೋಗುತ್ತಿದ್ದಾಗ ಶುಕ್ರವಾರ ಮಧ್ಯಾಹ್ನ ನ ಸಾಣೂರು ಗ್ರಾಮದ ಕೇಮಾರು ಪರ್ಪಲೆ ಎಂಬಲ್ಲಿ ಬೈಕಿನಲ್ಲಿ ಬಂದ ಮುಸುಕುಧಾರಿಗಳು  ಪರಾರಿಯಾಗಿದ್ದಾರೆ. ಇದರಿಂದ ಲಾರಿಯ ಗ್ಲಾಸ್ ಒಡೆದು ಸುಮಾರು 15,000 ರೂ. ನಷ್ಟ ಸಂಭವಿಸಿದೆ.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದೆಡೆ ನಿಟ್ಟೆ ಗ್ರಾಮದ ನಿಟ್ಟೆ ಪಂಚಾಯತ್ ಬಳಿ ಹಾದು ಹೋಗಿರುವ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸು ಕಾರ್ಕಳ ಕಡೆಯಿಂದ ಬೆಳ್ಮಣ್‌ಗೆ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಬಸ್ಸಿಗೆ ಕಲ್ಲು ಹೊಡೆದಿದ್ದು, ಬಸ್ಸಿನ ಗ್ಲಾಸ್ ಒಡೆದು 45,000 ರೂ. ನಷ್ಟವಾಗಿದೆ.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

 

 

 

Leave a Reply

Your email address will not be published. Required fields are marked *