Share this news

ಕಾರ್ಕಳ: ಕಾಶ್ಮಿರದ ಪೆಹಲ್ಗಾಮ್ ನಲ್ಲಿ ಹಿಂದೂಗಳ ಹತ್ಯೆ ದೇಶದ ಭದ್ರತೆ ಮತ್ತು ಭಯೋತ್ಪಾದಕರ ವಿರುದ್ಧದ ಕಠಿಣ ನಿರ್ಧಾರಗಳ ಕುರಿತು ಕಾಂಗ್ರೆಸ್ ಪಕ್ಷದ ಇಬ್ಬಗೆಯ ನೀತಿ ಬಯಲಾಗಿದೆ. ಕಾಂಗ್ರೆಸ್ ಇನ್ನಾದರೂ ನರಿ ಬುದ್ದಿ ಬಿಟ್ಟು ದೇಶದ ಭದ್ರತೆ, ರಕ್ಷಣೆ ವಿಚಾರದಲ್ಲಿ ಒಗ್ಗಟ್ಟಿನ ಸ್ಪಷ್ಟ ನಿಲುವು ಪ್ರಕಟಿಸಲಿ ಎಂದು ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಹೇಳಿದ್ದಾರೆ.

ಪಾಕಿಸ್ತಾನದ ಕುರಿತು ಕಾಂಗ್ರೆಸ್ ವರ್ತನೆ ತೀವ್ರ ಗೊಂದಲದಲ್ಲಿ ಇದ್ದಂತಿದೆ. ಪೆಹಲ್ಗಾಮ್ ಹಿಂದೂ ನಾಗರಿಕರ ಹತ್ಯೆಗೆ ಕೇಂದ್ರದ ಭದ್ರತಾ ವೈಫಲ್ಯವೆಂದು ಆರಂಭದಲ್ಲಿ ದೂರಿದ ಕಾಂಗ್ರೆಸ್ ನಂತರದಲ್ಲಿ ಯುದ್ಧ ಬದಲು ಶಾಂತಿ ಮಂತ್ರ ಜಪಿಸಿ ಭಯೋತ್ಪಾದಕರ ಪರ ಮೃದು ನಿಲುವು ತಳೆದಿತ್ತು. ಸಿ.ಎಂ ಸಿದ್ಧರಾಮಯ್ಯನವರಂತೂ ಯುದ್ಧ ಬೇಡ’ ಎಂದು ಪಾಕಿಸ್ತಾನ ಪರ ನುಡಿಯ ಹಾರೈಸಿದರು ಎಂದು ಅವರು ಕಿಡಿಕಾರಿದರು. ಕಾಂಗ್ರೆಸ್ ರಾಷ್ಟ್ರೀಯ ಭದ್ರತೆ, ಸೈನಿಕರ ಹಿತಾಸಕ್ತಿ ಅಥವಾ ಪ್ರಧಾನಿಯ ನಿರ್ಧಾರಗಳ ಬಗ್ಗೆ ಬೆಂಬಲ ನೀಡುವ ಬದಲು ತಪ್ಪು ಪ್ರಶ್ನೆಗಳನ್ನು ಎತ್ತುವ, ಗೊಂದಲ ಹುಟ್ಟಿಸುವ ರಾಜಕಾರಣವನ್ನು ಮಾಡುತ್ತ ಬಂದಿದೆ. ದೇಶ ಭಯೋತ್ಪಾದಕರ ವಿರುದ್ಧ ನಿರ್ಧಾರಾತ್ಮಕ ಕ್ರಮ ಕೈಗೊಂಡಿರುವ ಸಂದರ್ಭದಲ್ಲೂ ಕಾಂಗ್ರೆಸ್ ದೇಶದ ಪರವಾಗಿ ನಿಲ್ಲದೇ ನರಿ ಬುದ್ಧಿಯಲ್ಲಿ ಮುಳುಗಿದೆ. ಜನತೆ ಈ ನಾಟಕವನ್ನು ಸಹಿಸಲಾರರು. ಕಾಂಗ್ರೆಸ್ ಪಕ್ಷ ದ್ವಂದ್ವ ರಾಜಕಾರಣಕ್ಕೆ ಇತಿಶ್ರಿ ಹಾಡಿ ದೇಶ, ಕೇಂದ್ರ ಸರಕಾರ, ಸೈನಿಕರ ಪರ ಒಗ್ಗಟ್ಟಿನ ಕ್ಷಮತೆ ಪಾಲಿಸಿ, ಸರಕಾರದ ನಿರ್ಧಾರವನ್ನು ಬೆಂಬಲಿಸಲಿ ಎಂದು ಆಗ್ರಹಿಸಿದ್ದಾರೆ

 

 

 

 

 

 

 

 

Leave a Reply

Your email address will not be published. Required fields are marked *