ಕಾರ್ಕಳ: ಮುಂಬಯಿಯಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ರಾಜಬೆಟ್ಟು ನಿವಾಸಿ ಶರತ್ ಶೆಟ್ಟಿ(37) ಎಂಬವರು ಸೋಮವಾರ ಮುಂಜಾನೆ ಬಾವಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಶರತ್ ಶೆಟ್ಟಿ ಮುಂಬಯಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದು ಆಗಾಗ ಊರಿಗೆ ಬಂದು ಹೋಗುತ್ತಿದ್ದರು. ಪತ್ನಿ ಹಾಗೂ ಒಂದು ಮಗುವನ್ನು ಹೊಂದಿದ್ದ ಶರತ್ ಶೆಟ್ಟಿ ಯಾವ ಕಾರಣದಿಂದ ಆತ್ಮಹತ್ಯೆಗೆ ಶರಣಾದರು ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಈ ಕುರಿತು ಕಾರ್ಕಳ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.