Share this news

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ್ದು, ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲವು ಎಫ್​ಐಆರ್ ದಾಖಲಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದೇ ವೇಳೆ ಎಫ್​ಐಆರ್ ರದ್ದು ಕೋರಿ  ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಲಿಮಿಟೆಡ್​ (RCB) ಹಾಗೂ ಡಿಎನ್‌ಎ ಎಂಟರ್‌ಟೈನ್‌ಮೆಂಟ್ (DNA Entertainment) ಹೈ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಡಿಎನ್ಎ ಎಂಟರ್​ಟೈನ್ಮೆಂಟ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂನ ಕಾರ್ಯಕ್ರಮದ ಪ್ಲ್ಯಾನ್ ಸರ್ಕಾರ, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (KSCA) ನದ್ದು. ಆರ್‌ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಲು ಸರ್ಕಾರವೇ ಕರೆ ಕೊಟ್ಟಿತ್ತು ಎಂದು ರಿಟ್ ಅರ್ಜಿಯಲ್ಲಿ ಸ್ಫೋಟಕ ಅಂಶಗಳನ್ನು ಉಲ್ಲೇಖಿಸಿದೆ.

 ಭಾರತ ಟಿ20 ವಿಶ್ವಕಪ್ ಗೆದ್ದಾಗ ವಿಕ್ಟರಿ ಪರೇಡ್ ನಡೆಸಲಾಗಿತ್ತು. ಡಿಎನ್‌ಎ ಆಯೋಜಿಸಿದ್ದ ಪರೇಡ್ ನಲ್ಲಿ 3 ಲಕ್ಷ ಜನರಿದ್ದರೂ ಅವಘಡಗಳಾಗಿರಲಿಲ್ಲ. ವಾಂಖೇಡೆ ಸ್ಟೇಡಿಯಂನ ಪ್ರೇಕ್ಷಕರ ಸಾಮರ್ಥ್ಯ 32 ಸಾವಿರವಿದ್ದರೂ ಸಮಸ್ಯೆ ಆಗಿರಲಿಲ್ಲ. ಆರ್‌ಸಿಬಿ ವಿಕ್ಟರಿ ಪರೇಡ್ ನಡೆಸಲು ಅನುಮತಿಗಾಗಿ ಜೂನ್ 3 ರಂದು ಪತ್ರ ಬರೆಯಲಾಗಿದೆ.ತೆರೆದ ಬಸ್​ ನಲ್ಲಿ ಪರೇಡ್ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದರು. ರಾಜ್ಯ ಸರ್ಕಾರ ವಿಧಾನಸೌಧದ ಮುಂದೆ ಕಾರ್ಯಕ್ರಮಕ್ಕೆ ನಿರ್ಧರಿಸಿತು.ಪೊಲೀಸರು ವಿಧಾನಸೌಧದ ಕಾರ್ಯಕ್ರಮಕ್ಕೆ ಹೆಚ್ಚಿನ ಭದ್ರತೆ ನೀಡಿದರು. ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಗತ್ಯವಿದ್ದಷ್ಟು ಪೊಲೀಸರು ಇರಲಿಲ್ಲ. ಡಿಎನ್ಎ ಸಂಸ್ಥೆಯಿಂದಲೇ 584 ಖಾಸಗಿ ಸಿಬ್ಬಂದಿಯನ್ನು ನೇಮಿಸಲಾಗಿತ್ತು. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಬಂಧನಕ್ಕೆ ಆದೇಶಿಸಿದೆ ಎಂದು ಆರೋಪಿಸಿದೆ.

ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂನ ಕಾರ್ಯಕ್ರಮದ ಪ್ಲ್ಯಾನ್ ಸರ್ಕಾರ, KSCAನದ್ದು. ಆರ್‌ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಲು ಸರ್ಕಾರವೇ ಕರೆ ಕೊಟ್ಟಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿ ಚರ್ಚಿಸಿ ಕ್ಷಣಕ್ಷಣದ ಪ್ಲ್ಯಾನ್ ರೂಪಿಸಿದ್ದರು. ಸರ್ಕಾರ ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಿದ್ದರಿಂದಲೇ ಕಾಲ್ತುಳಿತವಾಗಿದೆ. ಲಕ್ಷಾಂತರ ಜನ ವಿಧಾನಸೌಧಕ್ಕೆ ಬಂದು, ಸ್ಟೇಡಿಯಂಗೂ ಬಂದಿದ್ದೇ ಈ ಘಟನೆ ಕಾರಣ ಎಂದು ತಿಳಿಸಿದೆ.

 

 

 

 

 

Leave a Reply

Your email address will not be published. Required fields are marked *