ಬೆಳಗಾವಿ: ಪೊಲೀಸ್ ಅಧಿಕಾರಿಯ ಮೇಲೆ ಹೊಡೆಯಲು ಕೈ ಎತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ.
ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಬೃಹತ್ ಸಮಾವೇಶದ ವೇಳೆ ಬಿಜೆಪಿ ಕಾರ್ಯಕರ್ತರು ವೇದಿಕೆಯತ್ತ ನುಗ್ಗಲು ಪ್ರಯತ್ನಿಸಿ ಪ್ರತಿಭಟನೆ ನಡೆಸುತ್ತಿರುವುದನ್ನು ಕಂಡು ಗರಂ ಆದ ಸಿಎಂ ಸಿದ್ದರಾಮಯ್ಯ ಭದ್ರತೆಗೆ ನಿಯೋಜಿಸಿದ್ದ ಧಾರವಾಡದ ಎಎಸ್ಪಿ ನಾರಾಯಣ ಭರಮನಿ ಅವರಿಗೆ ಹೊಡೆಯಲೆಂಬAತೆ ಕೈ ಎತ್ತಿದ್ದ ಘಟನೆ ನಡೆದಿತ್ತು. ಪೊಲೀಸ್ ಅಧಿಕಾರಿಯ ಮೇಲೆ ಕೈ ಮಾಡಲು ಮುಂದಾಗಿದ್ದ ಸಿ ಎಂ ಸಿದ್ದರಾಮಯ್ಯ ವಿರುದ್ಧ ಆರ್ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಜವಾಬ್ದಾರಿಯುತ ವ್ಯಕ್ತಿಯಾಗಿ ನಾಡಿನ ಸಮಸ್ತ ಚಿಂತನೆ- ಮಂಥನೆಗಳಿಗೆ ಧ್ವನಿಯಾಗುವುದರ ಮೂಲಕ ಕಾರ್ಯಾಂಗದ ಅಧಿಕಾರಿಗಳನ್ನು ಉತ್ತೇಜಿಸುವುದನ್ನು ಮರೆತು, ಕರ್ತವ್ಯ ನಿರತ ಅಧಿಕಾರಿಗೆ ಕೀಳು ಪದಗಳನ್ನು ಬಳಕೆ ಮಾಡಿದ್ದಲ್ಲದೇ ಗದರಿಸುವ ಧ್ವನಿಯಲ್ಲಿ ‘ಪೋಲಿಸ್ ಸಮವಸ್ತ್ರದ ಮೇಲಿರುವ ಅವರನ್ನು ಹೊಡೆಯಲು ಹೋಗಿ ಅವರ ಆತ್ಮಸ್ಥೆರ್ಯವನ್ನು ಕುಗ್ಗಿಸುವಂಥ ಕೆಲಸ ಮಾಡಿದ್ದಾರೆ. ಶಾಸಕಾಂಗದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಅವರ ಈ ನಡೆಯು ಸಂಪೂರ್ಣವಾಗಿ ಸಂವಿಧಾನದ ಆಶಯಕ್ಕೆ ವಿರೋಧವಾಗಿದೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.