Share this news

 

ಕಾರ್ಕಳ:ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಗೆ ಸೇರ್ಪಡೆಯಾದ ಕಾರ್ಕಳದ ಬೈಲೂರಿನ ಯುವಕ, ಕೌಡೂರು ಗ್ರಾಮದ ಸುಧಾಕರ ಆಚಾರ್ಯ ಮತ್ತು ವೀಣಾ ದಂಪತಿಯ ಪುತ್ರ ಸಾಗರ್‌ ಆಚಾರ್ಯ ಅವರನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅಭಿನಂದಿಸಿದ್ದಾರೆ.

ಅಗ್ನಿಪಥ್‌ ಯೋಜನೆಯಲ್ಲಿ ಆಯ್ಕೆಯಾಗಿ ಬೆಂಗಳೂರಿನ ಸೆಂಟರ್‌ನಲ್ಲಿ ತರಬೇತಿ ಪಡೆದು ಇದೀಗ ಅರುಣಾಚಲ ಪ್ರದೇಶದಲ್ಲಿ ಕರ್ತವ್ಯ ನಿಭಾಯಿಸಲು ತೆರಳುತ್ತಿರುವ ಸಾಗರ್ ಅವರನ್ನು ಶನಿವಾರ ಶಾಸಕ ಸುನಿಲ್ ಕುಮಾರ್ ಅವರು ವಿಕಾಸ ಜನಸೇವಾ ಕಚೇರಿಯಲ್ಲಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ, ಜಯರಾಮ್ ಸಾಲ್ಯಾನ್, ರಾಕೇಶ್ ಶೆಟ್ಟಿ, ಸುಮಿತ್ ಶೆಟ್ಟಿ ಬೈಲೂರು, ಹಾಗೂ ಪ್ರಮುಖರು ಉಪಸ್ಥಿತರಿದ್ದರು

 

 

 

 

 

 

 

Leave a Reply

Your email address will not be published. Required fields are marked *