Share this news

 

ಕಾರ್ಕಳ: ತಾಲೂಕಿನ ಮಾಳದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ಆಡಳಿತದ ವಿರುದ್ಧ ಮಾಳ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ನಡೆದ ಧರಣಿ ಸತ್ಯಾಗ್ರಹವನ್ನು ಎಲ್ಲರೂ ಕಿವಿಯ ಮೇಲೆ ಹೂವು ಇಟ್ಟುಕೊಂಡು ವಿಶಿಷ್ಟವಾಗಿ ನಡೆಸಿರು.

ಪ್ರತಿಭಟನೆಯಲ್ಲಿ ಗೇರುನಿಗಮ ದ ಮಾಜಿ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುಧಾಕರ ಡೋಂಗ್ರೆ, ಕಾರ್ಯದರ್ಶಿ ರಾಜೇಶ್ ನಾಯ್ಕ್, ಪಂಚಾಯತ್ ಅಧಕ್ಷ ಉಮೇಶ್ ಪೂಜಾರಿ, ಶ್ರೀರಂಗ ಜೋಶಿ. ಮಾತನಾಡಿದರು.
ಅಭಿವೃದ್ಧಿ ಅಧಿಕಾರಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಲಾಯಿತು. ಸುಧೀರ್ ಶೆಟ್ಟಿ ನಿರೂಪಿಸಿದರು. ಪಂಚಾಯತ್ ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು.

 

 

 

 

 

 

 

Leave a Reply

Your email address will not be published. Required fields are marked *