ಹೆಬ್ರಿ: ಹೆಬ್ರಿ ತಾಲೂಕು ಆಡಳಿತ ಮತ್ತು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಕಂದಾಯ ಇಲಾಖೆ ವತಿಯಿಂದ ನಡೆದ ಹೆಬ್ರಿ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪಿ ಆರ್ ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಲಾವಣ್ಯ ಹೆಚ್. ವಿ ಪ್ರಥಮ ಸ್ಥಾನವನ್ನು, ಪ್ರಬಂಧ ಸ್ಪರ್ಧೆಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಇಂಪನ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ ಇವರನ್ನು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಹಾಗೂ ಗುರುವೃಂದದವರು ಅಭಿನಂದಿಸಿದ್ದಾರೆ