ಕಾರ್ಕಳ:ಮಿಯ್ಯಾರು ವಲಯದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಮಾಳ ಕೂಡಬೆಟ್ಟು ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಜೂ.27 ರಂದು ನಡೆಯಿತು.
ಜನಜಾಗೃತಿ ವೇದಿಕೆಯ ಮಿಯ್ಯಾರು ವಲಯದ ಅಧ್ಯಕ್ಷ ಜಯರಾಮ ಬಂಗೇರ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಅಧ್ಯಾಪಕ ಹಾಗೂ ವಾಗ್ಮಿ ಮುನಿರಾಜ್ ರೆಂಜಾಳ ಮಾತನಾಡಿ, ಮಕ್ಕಳಿಗೆ ದುಶ್ಚಟದ ಬಗ್ಗೆ ಅರಿವು ಮೂಡಿಸಲು ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು ಕಾಯಿಲೆಯಿಂದ ಬಳಲುವ ಜನಸಂಖ್ಯೆಗಿಂತ ದುಷ್ಟಕ್ಕೆಬಲಿಯಾಗಿ ಮರಣಹೊಂದುವವರು ಸಂಖ್ಯೆ ಹೆಚ್ಚಾಗಿದೆ ಆದುದರಿಂದ ಹದಿಹರೆಯದ ಮಕ್ಕಳು ನೀವು ನಿಮ್ಮ ಭವಿಷ್ಯವನ್ನು ದುಶ್ಚಟಮುಕ್ತ ಸಮಾಜ ಕಟ್ಟುವಲ್ಲಿ ಮುಡಿಪಾಗಿರುವಂತೆ ಕಿವಿಮಾತು ಹೇಳಿದರು.
ಎಸ್ ಡಿ ಎಂ ಸಿ ಅಧ್ಯಕ್ಷ ವಸಂತ ಶೇರಿಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶಿಶುಪಾಲ ಹೆಗ್ಡೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಘುಪತಿ ಕಾಮತ್ , ಶೌರ್ಯ ವಿಪತ್ತು ಘಟಕದ ಮಾಸ್ಟರ್ ಸದಾನಂದ ಸಾಲಿಯನ್, ಮಿಯ್ಯಾರು ವಲಯದ ವಲಯಧ್ಯಕ್ಷ ಅಶ್ವಥ್ ನಾರಾಯಣ ಮತ್ತು ಶಿಕ್ಷಕ ವೃಂದ ಉಪಸ್ಥಿತರಿದ್ದರು