ಕಾರ್ಕಳ: ಇತ್ತೀಚೆಗೆ ನಿಧನರಾದ ಸಮಾಜಸೇವಕ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ಅವರಿಗೆ ಕಾರ್ಕಳ ಬಿಜೆಪಿ ವತಿಯಿಂದ ಶಾಸಕ ಸುನಿಲ್ ಕುಮಾರ್ ನಿವಾಸದಲ್ಲಿ ಶೃದ್ಧಾಂಜಲಿ ಅರ್ಪಿಸಲಾಯಿತು.
ಕೃಷ್ಣರಾಜ ಹೆಗ್ಡೆ ಅವರು ಸದಾ ಸಮಾಜದ ಹಿತವನ್ನು ಕಾಳಜಿಯಿಂದ ನೋಡಿಕೊಂಡು, ನಿಸ್ವಾರ್ಥ ಸೇವಾ ಮನೋಭಾವದ ಮೂಲಕ ಎಲ್ಲರಿಗೂ ಪ್ರೇರಣೆಯಾಗಿದ್ದರು. ಅವರ ಬದ್ಧತೆ, ತ್ಯಾಗ ಮತ್ತು ಜನಪರ ಚಿಂತನೆಗಳು ನಮ್ಮೆಲ್ಲರಿಗೂ ದಾರಿದೀಪವಾಗಿವೆ. ಅಗಲಿಕೆ ಬಿಜೆಪಿ, ಹಿಂದೂ ಸಂಘಟನೆ ಹಾಗೂ ಸಮಗ್ರ ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸ್ಮರಣಾರ್ಥ ಶಾಸಕರ ಮನೆಯಲ್ಲಿ ಶೋಕ ಸಭೆ ಆಯೋಜಿಸಲಾಗಿದ್ದು, ವಿವಿಧ ನಾಯಕರು ಹಾಗೂ ಸಂಘಟನಾ ಪ್ರತಿನಿಧಿಗಳು ಭಾಗವಹಿಸಿ, ಅವರ ಸೇವೆಯನ್ನು ಸ್ಮರಿಸಿದರು.