ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಯನ್ನು 1 ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ, ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. ಇದಕ್ಕೆ ತಡೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ತಿಮರೋಡಿಗೆ ಈಗ ತಾತ್ಕಾಲಿಕ ಜಯ ಸಿಕ್ಕಿದೆ. ಅಕ್ಟೋಬರ್ 8 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ.
ಪುತ್ತೂರಿನ ಎಸಿ ಸ್ಟೆಲ್ಲಾ ವರ್ಗೀಸ್ ಗಡಿಪಾರು ಆದೇಶ ಹೊರಡಿಸಿದ್ದರು. ಬಳಿಕ ಫೊನ್ ಮಹೇಶ್ ಶೆಟ್ಟಿ ತಿಮರೋಡಿ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದರು.ಇದೀಗ ತಿಮರೋಡಿ ನಿರೀಕ್ಷೆಯಂತೆ, ಅವರ ಪರ ಆದೇಶ ಬಂದಿದೆ. ಹೀಗಾಗಿ ಸದ್ಯಕ್ಕೆ ಸಂಕಷ್ಟದಿಂದ ತಿಮರೋಡಿ ಪಾರಾಗಿದ್ದಾರೆ. ಇನ್ನೊಂದೆಡೆ ಅಕ್ರಮ ಶಸ್ತ್ರಾಸ್ತ್ರ ಮನೆಯಲ್ಲಿ ಹೊಂದಿರುವ ಆರೋಪದಲ್ಲಿ ತಿಮರೋಡಿಗೆ 3 ನೋಟಿಸ್ ಜಾರಿಯಾಗಿದೆ. ಆದರೆ ವಿಚಾರಣೆಗೆ 3 ಬಾರಿಯೂ ಗೈರಾಗಿರುವ ತಿಮರೋಡಿ, ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದಾರೆ.
ಸೆ.18ರಂದು ತಿಮರೋಡಿ ಗಡೀಪಾರು ಆದೇಶ ಮಾಡಿದ್ದ ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ 18-09-2025 ರಿಂದ 17-09-2026 ರವರೆಗೆ ಒಂದು ವರ್ಷ ಅವಧಿಗೆ ಗಡೀಪಾರು ಮಾಡಿ ಆದೇಶ ಹೊರಡಿಸಿತ್ತು. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶ ಮಾಡಿತ್ತು.