Share this news

ಕಾರ್ಕಳ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ವಿದ್ಯಾರ್ಥಿಗಳು ನಿಟ್ಟೆಯ ಪರ್ಪಲೆಯಲ್ಲಿರುವ ಕ್ರಿಸ್ತ ಸೇವಕೀ ಆಶ್ರಮವನ್ನು ಸಂದರ್ಶಿಸಿದರು.

ಆಶ್ರಮ ನಿವಾಸಿಗಳೊಂದಿಗೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ದಿನಸಿ ಸಾಮಾಗ್ರಿಗಳನ್ನು ಹಂಚಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಪ್ರಾಂಶುಪಾಲ ಸಾಹಿತ್ಯ, ಘಟಕಾಧಿಕಾರಿ, ವಾಣಿಜ್ಯ ವಿಭಾಗದ ಉಪನ್ಯಾಸಕ ಶೈಲೇಶ್, ಕನ್ನಡ ಉಪನ್ಯಾಸಕ ಸಂತೋಷ್ ನೆಲ್ಲಿಕಾರು ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಕೀರ್ತಿ ಆಚಾರ್ಯ, ಹಿಂದಿ ಉಪನ್ಯಾಸಕಿ ಶ್ರೀಮತಿ ಅಶ್ವಿನಿ, ಕ್ಷೇಮಪಾಲಕರಾದ ಸುಕೇಶ್, ಮಂಜುನಾಥ್, ಚಾಲಕರಾದ ಚಂದ್ರಶೇಖರ್ ಮತ್ತು ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *