Share this news

 

ಬೆಂಗಳೂರು : ಆರ್ ಎಸ್ ಎಸ್ ಪಥಸಂಚಲನಕ್ಕೆ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದ್ದು, ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಸೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದೇಶ ಹೊರಡಿಸಿತ್ತು. ಇದೀಗ ಈ  ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗಿದೆ.

ಪಥಸಂಚಲನ ನಿರ್ಬಂಧಿಸುವ ಸಂಬಧ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್​ಎಸ್​​ಎಸ್ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಸಂಸ್ಥೆ ರಿಟ್ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್​ಗೆ ನೋಟಿಸ್ ನೀಡಿದೆ.

2025 ರ ಅ.18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಆರ್​ಎಸ್​​ಎಸ್ ಪ್ರಶ್ನಿಸಿತ್ತು. ಈ ವಿಚಾರವಾಗಿ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್ ಪೀಠ, ಅನುಮತಿಯಿಲ್ಲದೇ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು ಅಭಿಪ್ರಾಯಪಟ್ಟಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *