
ಬೆಂಗಳೂರು, ಅ. 30: ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಕಲ್ಯಾಣಕ್ಕಾಗಿ ಹಣ ನೀಡದ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಸಚಿವ ಸಂಪುಟ ಸಭೆಯಲ್ಲೇ ರೋಷಾವೇಶ ಪ್ರದರ್ಶಿಸಿದ್ದಾರೆ. SCSP TSP ಗೆ ಅನುದಾನ ಹಂಚಿಕೆ ಮಾಡದಿರುವುದು ಯಾಕೆ?ನೀವು ಏನು ಅಂದುಕೊAಡಿದ್ದೀರಿ? SCSP TSP ಹಣ ಬೇರೆ ಕಡೆ ಬಳಸುತ್ತಿದ್ದೀರಾ?ಇದರಿಂದ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಏರುಧ್ವನಿಯಲ್ಲಿಯೇ ಸಚಿವರು ಪ್ರಶ್ನಿಸಿದ್ದು, ಮಹದೇವಪ್ಪ ಅವರ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ದಂಗಾಗಿ ಹೋಗಿದ್ದಾರೆ.
ಸಚಿವ ಸಂಪುಟ ಸಭೆ ವೇಳೆ ನೇರವಾಗಿ ಸಿಎಂಗೆ ಹೇಳದೆ ಸಂಪುಟ ಸಹೋದ್ಯೋಗಿಗಳ ಮೇಲೆ ಮಹದೇವಪ್ಪ ಅಸಮಾಧಾನ ಹೊರಹಾಕಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ SCSP TSP ಅನುದಾನದ ಬಗ್ಗೆ ಚರ್ಚೆ ವೇಳೆ ಗಂಗಾಕಲ್ಯಾಣ ಯೋಜನೆಗೆ ಸಂಬAಧಿಸಿದ ವಿಷಯದಲ್ಲಿ ಸಚಿವ ಕೆ.ಜೆ.ಜಾರ್ಜ್ ಮತ್ತು ಹೆಚ್.ಸಿ.ಮಹದೇವಪ್ಪ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಈ ವೇಳೆ ನಾನು ಎದ್ದು ಹೊರಟೇ ಬಿಡುತ್ತೇನೆಂದು ಸಚಿವ ಮಹದೇವಪ್ಪ ಕೂಗಾಡಿದ್ದಾರೆ.
SCSP TSP ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಈ ಹಿಂದಿನಿAದಲೂ ವಿಪಕ್ಷಗಳು ಮಾಡುತ್ತಲೇ ಬಂದಿದ್ದವು. ಈ ವಿಚಾರ ವಿಧಾನ ಪರಿಷತ್ನಲ್ಲೂ ಭಾರಿ ಚರ್ಚೆಗೆ ಕಾರಣವಾಗಿತ್ತು. ಹಣವನ್ನ ಬೆರೆ ಯೋಜನೆಗಳಿಗೆ ಬಳಸಿದ ಪರಿಣಾಮ ದಲಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಆಡ್ಡಿಯಾಗಿದೆ ಎಂದು ಸದಸ್ಯರಾದ ಹೇಮಲತಾ ನಾಯಕ್ ಹಾಗೂ ಶರವಣ ಆರೋಪಿಸಿದ್ದರು.
ಆದರೆ, ಸದನದಲ್ಲಿ ಆರೋಪ ನಿರಾಕರಿಸಿದ್ದ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಗ್ಯಾರಂಟಿ ಯೋಜನೆಗಳಿಗೆ ಈ ಹಣವನ್ನು ಬಳಸಿಲ್ಲ. ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲು ಆಗುವುದಿಲ್ಲ. ಮೀಸಲಿಟ್ಟ ಹಣವನ್ನು ಆ ಸಮುದಾಯದ ಜನರಿಗೆ ಮಾತ್ರ ಬಳಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದರು.ಆದರೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಅನುದಾನದ ಕುರಿತು ಸತ್ಯ ಬಿಚ್ಚಿಟ್ಟರು.




