Share this news

ಕಲಬುರಗಿ: ಜಿಲ್ಲೆಯ ಚಿತ್ತಾಪುರ ಪೊಲೀಸ್‌ ಠಾಣೆ ಮುಂಭಾಗದಲ್ಲಿ 2019ರ ಆಗಸ್ಟ್‌ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣ ಹಿಂಪಡೆದ ರಾಜ್ಯ ಸರಕಾರದ ಸಂಪುಟ ಸಭೆ ನಿರ್ಣಯಕ್ಕೆ ಕಲಬುರಗಿ ಹೈಕೋರ್ಟ್‌ ಪೀಠ ಮಂಗಳವಾರ ತಡೆ ನೀಡಿದೆ. ಇದರಿಂದ ರಾಜ್ಯ ಸರಕಾರಕ್ಕೆ ಮತ್ತೊಂದು ಹಿನ್ನಡೆಯಾಗಿದೆ.

ಪ್ರಕರಣ ಹಿಂಪಡೆದರೆ ಪೊಲೀಸರ ಆತ್ಮಸ್ಥೈರ್ಯ ಕುಂದುತ್ತದೆ. ಆದ್ದರಿಂದ ಕಲ್ಲು ತೂರಾಟ ಪ್ರಕರಣ ಹಿಂಪಡೆಯಬಾರದು ಎಂದು ಬೆಂಗಳೂರಿನ ಗಿರೀಶ್‌ ಭಾರದ್ವಾಜ್‌ ಎಂಬುವವರು ಸರಕಾರದ ನಿರ್ಧಾರದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ನ್ಯಾಯಮೂರ್ತಿ ಸಚಿನ್‌ ಶಂಕರ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿ ರಾಜ್ಯ ಸರಕಾರದ ನಿರ್ಧಾರಕ್ಕೆ ತಡೆ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್‌ 4ಕ್ಕೆ ಮುಂದೂಡಿದೆ.

ಕಳೆದ 2019ರ ಆಗಸ್ಟ್‌ 11ರಂದು
ಬಕ್ರೀದ್‌ ಹಬ್ಬದ ವೇಳೆ ಚಿತ್ತಾಪುರದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ಹಿಡಿದ ಕೆಲ ಯವಕರು ವಾಹನವನ್ನು ಪೊಲೀಸ್‌ ಠಾಣೆಗೆ ಒಪ್ಪಿಸಿದ್ದರು. ಸ್ಥಳಕ್ಕೆ ಆಗಮಿಸಿದ ಕೆಲವು ಅನ್ಯ ಕೋಮಿನ ಯುವಕರು ಗಲಾಟೆ ಮಾಡಿದ್ದರು. ಇದಲ್ಲದೆ ಗೋ ರಕ್ಷಣೆ ಮಾಡಿದ್ದ ಯುವಕರನ್ನು ಠಾಣೆಯಿಂದ ಹೊರ ತಂದು ಹಲ್ಲೆ ಮಾಡಿದ್ದರು. ಈ ವೇಳೆ ಮಧ್ಯ ಪ್ರವೇಶ ಮಾಡಿದ್ದ ಪೊಲೀಸರು ಉದ್ರಿಕ್ತ ಗುಂಪಿನ ವಿರುದ್ಧ ಲಘು ಲಾಠಿ ಪ್ರಹಾರ ನಡೆಸಿದ್ದರು. ಇದರಿಂದ ಕೋಪಗೊಂಡ ಅನ್ಯ ಕೋಮಿನ ಯುವಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಪ್ರಕರಣ ನಡೆದ ಕೆಲವು ದಿನಗಳ ನಂತರ ಪೊಲೀಸ್‌ ಇಲಾಖೆ ಸ್ವಯಂ ಪ್ರೇರಿತವಾಗಿ ದೂರು ದಾಖಲು ಮಾಡಿಕೊಂಡು 13 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಹ ಸಲ್ಲಿಕೆ ಮಾಡಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *