
ಕಾರ್ಕಳ, ಡಿ.01:ಬಾಂಗ್ಲಾದೇಶದಲ್ಲಿ ನಡೆದ ಮಹಿಳಾ ಕಬ್ಬಡಿ ವಿಶ್ವಕಪ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಭಾರತಕ್ಕೆ ವಿಶ್ವಕಪ್ ತಂದುಕೊಟ್ಟ ನಮ್ಮ ನಾಡಿನ ಹೆಮ್ಮೆಯ ಪ್ರತಿಭೆ ಮೂಲತಃ ಕಾರ್ಕಳ ಮಿಯ್ಯಾರು ಗ್ರಾಮದವರಾಗಿರುವ ಪ್ರಸ್ತುತ ಸುರತ್ಕಲ್ ಗುಡ್ಡೆಕೊಪ್ಪದ ನಿವಾಸಿಯಾಗಿರುವ ನಾರಾಯಣ ಪೂಜಾರಿ ಮತ್ತು ಶಶಿಕಲಾ ದಂಪತಿಗಳ ಪುತ್ರಿ ಕು. ಧನಲಕ್ಷ್ಮೀ ಯವರನ್ನು ವಿಕಾಸ ಜನಸೇವಾ ಕಛೇರಿಯಲ್ಲಿ ಬಿಜೆಪಿ ಪ್ರಮುಖರೊಂದಿಗೆ ಶಾಸಕ ವಿ ಸುನಿಲ್ ಕುಮಾರ್ ರವರು ಅಭಿನಂದಿಸಿ ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಸಹ ಸಂಸ್ಥಾಪಕರಾದ ಗಣನಾಥ್ ಶೆಟ್ಟಿ, ಶ್ರೀ ಅಶ್ವಥ್ ಎಸ್ ಎಲ್, ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಪ್ರಧಾನ ಕಾರ್ಯದರ್ಶಿ ಸತೀಶ್ ಬೋಳ, ರವೀಂದ್ರ ಮಡಿವಾಳ, ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ, ಮಹಿಳಾ ಮೋರ್ಚಾ ಪ್ರಮುಖರು ಹಾಗೂ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

.
.
