
ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ (ಡಿ.10) ನಡೆದಿದೆ.
ಕುಕ್ಕುಂದೂರು ಗ್ರಾಮದ ಗ್ರೀನ್ಲ್ಯಾಂಡ್ ಫ್ಯಾಕ್ಟರಿ ಬಳಿಯ ನಿವಾಸಿ ದಿನಕರ ಪೂಜಾರಿ(50) ಮೃತಪಟ್ಟವರು.
ಅವರು ಬುಧವಾರ ಸಂಜೆ 7 ಗಂಟೆಗೆ ಅಯ್ಯಪ್ಪನಗರ ಕಡೆಯಿಂದ ಜಾರ್ಕಳ ಕಡೆಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ನಾಗೇಶ್ ಪೈ ಇನ್ನೋವಾ ಕಾರು ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ದಿನಕರ ಪೂಜಾರಿಯವರು ಡಾಮಾರು ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.
.
