
ಕಾರ್ಕಳ, ಡಿ.18: ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮವು ಡಿ. 26ರಿಂದ 28 ರವರೆಗೆ ನಡೆಯಲಿದೆ ಎಂದು ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ. ಎಂ ಪ್ರಭಾಕರ್ ಜೋಶಿ ಹೇಳಿದರು. ಅವರು ಬುಧವಾರ ಕಾರ್ಕಳ ಪತ್ರಿಕಾ ಭವನದ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿಸೆಂಬರ್ 26 ಶುಕ್ರವಾರದಂದು ಬೆಳಿಗ್ಗೆ 8 ಗಂಟೆಗೆ ವಾಸ್ತು ಪೂಜೆ ಮತ್ತು ಗಣ ಹೋಮ ನೂತನ ತರಗತಿ ಕೊಠಡಿಗಳ ಸಭಾಭವನ ಮತ್ತು ಪ್ರವೇಶದಾರದ ಉದ್ಘಾಟನೆ, ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣ ಮತ್ತು ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ.ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಗೋಪಾಲ ಶೇರಿಗಾರ್, ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯ್ಲಿ ಹಾಗೂ ಇತರೇ ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ 5.00ಕ್ಕೆ ಸಾಂಸ್ಕೃತಿಕ ನೃತ್ಯ ವೈಭವ ಕಾರ್ಯಕ್ರಮ ಜೋಡು ಜೀಟಿಗೆ ಜನಪದ ತುಳು ನಾಟಕ ನಡೆಯಲಿದೆ.
ಡಿಸೆಂಬರ್ 27 ಶನಿವಾರದಂದು ಸಭಾ ಕಾರ್ಯಕ್ರಮ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ ಸಂಜೆ 5:00ಗೆ ಸಾಂಸ್ಕೃತಿಕ ವೈವಿಧ್ಯ, ಶಾಲಾ ಮಕ್ಕಳಿಂದ ಭಕ್ತ ಪ್ರಹ್ಲಾದ ಪೌರಾಣಿಕ ನಾಟಕ ನಡೆಯಲಿದೆ. ರಾತ್ರಿ 7:00ಗೆ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ. ರಾತ್ರಿ 9:00ಗೆ ಸದ್ಭಾವನ ಮಹಿಳಾ ಯಕ್ಷಗಾನ ಮಂಡಳಿ ಬೆಂಗಳೂರು ಇವರಿಂದ ಮಹಿಷ ಮರ್ದಿನಿ ಯಕ್ಷಗಾನ ಪ್ರದರ್ಶನ ನಡೆಯಲಿದೆ .ಡಿ. 28 ಆದಿತ್ಯವಾರ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಲಿದ್ದು ಸಭಾಧ್ಯಕ್ಷತೆಯನ್ನು ರಾಮಕೃಷ್ಣ ಮಠ ಬೆಂಗಳೂರು ಇದರ ಅಧ್ಯಕ್ಷರಾದ ಸ್ವಾಮೀ ಚಿತಕಾನಂದಾಜೀ ವಹಿಸಲಿದ್ದಾರೆ ಬಳಿಕ ಶಾಲಾ ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7:00ಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಸಭಾಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ .ವೀರೇಂದ್ರ ಹೆಗ್ಡೆ ಮುಖ್ಯ ಅತಿಥಿಗಳಾಗಿ ಆಳ್ವಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಅಳ್ವ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ರಾತ್ರಿ 9ರಿಂದ ಸಂಗೀತ ರಸಮಂಜರಿ ರಾತ್ರಿ 10.30 ರಿಂದ ಗುರುಕುಲ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ‘ಬಾಕಿಲ್ ದೆಪ್ಪುಲೆ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ. ಪತ್ರಿಕಾಗೋಷ್ಠಿಯಲ್ಲಿ ಗುರುಕುಲ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗಜಾನನ ಮರಾಠೆ ಅಮೃತ ಮಹೋತ್ಸವ ಸಮಿತಿಯ ಗೌರವ ಅಧ್ಯಕ್ಷ ನಾಗಭೂಷಣ ಜೋಶಿ ಗುರುಕುಲ ಶಾಲೆಯ ಸಂಚಾಲಕ ಸುಧಾಕರ ಡೊಂಗ್ರೆ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ನಾಗಭೂಷಣ್ ಮರಾಠೆ ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ಉಪಸ್ಥಿತರಿದ್ದರು.
.
.
