
ಚಿತ್ರ,ವರದಿ: ಪ್ರಮೋದ್ ಚಂದ್ರ ಪೈ,ಮುನಿಯಾಲು
ಹೆಬ್ರಿ,ಮೇ.18: ಧರ್ಮಸ್ಥಳದಿಂದ ಕಾರ್ಕಳ ಮಾರ್ಗವಾಗಿ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಮಾರುತಿ ಆಲ್ಟೊ ಕಾರೊಂದು ಮುನಿಯಾಲಿನಲ್ಲಿ ಪಲ್ಟಿಯಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಈ ಅಪಘಾತದಲ್ಲಿ ಕಾರು ಚಾಲಕ ಸೇರಿ ಇಬ್ಬರು ಪುರುಷರು, ಮೂವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಸ್ವಲ್ಪ ಗಾಯಗಳಾಗಿದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮುನಿಯಾಲಿನ ಮಂಜುನಾಥ ಪೈ ಮನೆಯ ಸಮೀಪದ ತಿರುವಿನಲ್ಲಿ ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ.ಕಾರನ್ನು ಸ್ಥಳೀಯರ ಸಹಾಯದಿಂದ ಕ್ರೇನ್ ನ ಮೂಲಕ ಮೇಲೆತ್ತಲಾಯಿತು.



.
.
.
.
.
.
.
.
.
.
.
.
.
.
.
.
.
.
.
.
