
ಕಾರ್ಕಳ, ಮೇ.27: ಅಂದು ದೇವರಾಜ್ ಅರಸು ಅವರನ್ನು ಸಿಎಂ ಸ್ಥಾನದಿಂದ ಹೀನಾಯವಾಗಿ ಇಳಿಸಿದ ರೀತಿಯಲ್ಲಿ ಇಂದು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸುವ ಮೂಲಕ ಓಬಿಸಿ ಸಮುದಾಯದ ರಾಜಕೀಯ ಉತ್ಕರ್ಷವನ್ನು ಕಾಂಗ್ರೆಸ್ ಹೈಕಮಾಂಡ್ ಸಹಿಸುವುದಿಲ್ಲ ಎಂಬುದನ್ನು ಮತ್ತೆ ಸಾಬೀತು ಮಾಡಿದೆ.
ಊಳುವವನೇ ಹೊಲದೊಡೆಯ ಕಾಯ್ದೆ ಜಾರಿ ಸೇರಿದಂತೆ ಕರ್ನಾಟಕದಲ್ಲಿ ಕ್ರಾಂತಿಕಾರಿ ಆಡಳಿತ ನೀಡುವ ಮೂಲಕ ಜನಮನ್ನಣೆ ಗಳಿಸಿದ್ದ ಅರಸು ಅವರ ಜನಪ್ರಿಯತೆಯನ್ನು ಸಹಿಸದ ಇಂದಿರಾ ಗಾಂಧಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರು. ಅರಸು ನಂತರ ಕರ್ನಾಟಕ ಹಾಗೂ ರಾಷ್ಟ್ರ ಮಟ್ಟದ ಜನಪ್ರಿಯ ಓಬಿಸಿ ನಾಯಕರಾಗಿದ್ದ ಸಿದ್ದರಾಮಯ್ಯ ಅವರನ್ನು ಈಗ ರಾಹುಲ್ ಗಾಂಧಿ ಪದಚ್ಯುತಿಗೊಳಿಸಿದ್ದಾರೆ. ನೂಲಿನಂತೆ ಸೀರೆ ಎಂಬAತೆ ದುರ್ಬಲ ಸಮುದಾಯವನ್ನು ಅವಮಾನಿಸುವುದು ಗಾಂಧಿ ಕುಟುಂಬದ ಡಿಎನ್ ಎಯಲ್ಲೇ ಇದೆ ಎಂದು ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ಒಂದೆಡೆ ತಾನು ಓಬಿಸಿ ಸಮುದಾಯದ ಧ್ವನಿಯನ್ನು ಆಲಿಸುವುದಕ್ಕೆ ವಿಳಂಬ ಮಾಡಿದೆ, ಜಾತಿ ಗಣತಿ ನಡೆಸಿ ಓಬಿಸಿ ಸಮುದಾಯಕ್ಕೆ ನ್ಯಾಯ ಕೊಡುತ್ತೇನೆಂದು ವೇದಿಕೆಯಲ್ಲಿ ರಾಜಕೀಯ ಭಾಷಣ ಮಾಡುವ ರಾಹುಲ್ ಗಾಂಧಿ ಇನ್ನೊಂದೆಡೆ ಓಬಿಸಿ ಸಮುದಾಯದ ರಾಜಕೀಯ ನಾಯಕರನ್ನು ಅಧಿಕಾರದಿಂದ ಎಳೆದು ಕೆಡವುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇದ್ದ ಒಬ್ಬನೇ ಒಬ್ಬ ಓಬಿಸಿ ಮುಖ್ಯಮಂತ್ರಿಯನ್ನು ಯಾಕೆ ಪದಚ್ಯುತಿಗೊಳಿಸಿದಿರಿ ಎಂಬ ಪ್ರಶ್ನೆಗೆ ರಾಹುಲ್ ಗಾಂಧಿ ಉತ್ತರಿಸಬೇಕಾಗುತ್ತದೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
