
ನವದೆಹಲಿ, ಜು 24: ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಳೆದ 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದ್ದಾರೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬAಧ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಉಪವಾಸ ಸತ್ಯಾಗ್ರಹ ಕೊನೆಗೊಳಿಸಿದ್ದಾರೆ. ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆಪಿ ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಿದರು.
ಸರ್ಕಾರದೊAದಿಗೆ ಸುದೀರ್ಘ ಮಾತುಕತೆಯ ಬಳಿಕ ಹಾಗೂ ದೇಶದಲ್ಲಿ ಹಿಂಸಾಚಾರ ಸಂಭವಿಸುವ ಸಾಧ್ಯತೆಯನ್ನು ಮನಗಂಡು ಈ ನಿರ್ಧಾರ ಕೈಗೊಂಡಿರುವುದಾಗಿ ಸೋನಂ ವಾಂಗ್ಚುಕ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸೋನಂ ವಾಂಗ್ಚುಕ್, ವಿವಿಧ ರಾಜಕೀಯ ಪಕ್ಷಗಳ 65 ಸಂಸದರು ಉಪವಾಸ ಕೈಬಿಡುವಂತೆ ಮನವಿ ಮಾಡಿದ್ದರು. ಎಲ್ಲರೂ ಯಾವುದೇ ರೀತಿಯ ಹಿಂಸಾಚಾರಕ್ಕೆ ಅವಕಾಶ ನೀಡದಂತೆ ಜಾಗರೂಕರಾಗಿರಬೇಕು ಎಂದು ಕರೆ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ
ಉಪವಾಸ ಅಂತ್ಯಗೊಳಿಸಿದ ಬಳಿಕ ಸೋನಂ ವಾಂಗ್ಚುಕ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ವೈದ್ಯರ ಸಲಹೆಯಂತೆ ಆರೋಗ್ಯ ಕಾಪಾಡಿಕೊಳ್ಳಬೇಕು ಮತ್ತು ಶೀಘ್ರವೇ ತೂಕವನ್ನು ಮರಳಿ ಪಡೆಯಬೇಕು ಎಂದು ಅವರು ಸಂದೇಶ ನೀಡಿದ್ದಾರೆ.
ದೇಶದಲ್ಲಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಗಟ್ಟಲು ಕಠಿಣ ನಿಯಮಗಳನ್ನು ಒಳಗೊಂಡ ಹೊಸ ಮಸೂದೆ ತರಲಾಗುವುದು ಎಂದು ಪ್ರಧಾನಿ ಮೋದಿ ತಡರಾತ್ರಿ ಸೆಲ್ಫಿ ವಿಡಿಯೋದಲ್ಲಿ ಘೋಷಿಸಿದ್ದಾರೆ. ಈ ಮಸೂದೆಯಲ್ಲಿ ಫಾಸ್ಟ್ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮಗಳು ಇರಲಿವೆ ಎಂದು ತಿಳಿಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
