
ನವದೆಹಲಿ,ಜು.27: ದೇಶದಲ್ಲಿ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಸಾರ್ವಜನಿಕ ಪರೀಕ್ಷೆಗಳ ಪಾರದರ್ಶಕತೆ ಮತ್ತು ನಂಬಿಕೆಯನ್ನು ಕಾಪಾಡುವ ಉದ್ದೇಶದಿಂದ ಸಾರ್ವಜನಿಕ ಪರೀಕ್ಷಾ ಅಕ್ರಮಗಳ ತಡೆಗೆ ತಿದ್ದುಪಡಿ ಮಸೂದೆ 2026 ಅನ್ನು ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ.
ಇತ್ತೀಚಿನ ನೀಟ್ ಸೇರಿದಂತೆ ಪ್ರಮುಖ ಪರೀಕ್ಷಾ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಮೂಲ 2024ರ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಮಸೂದೆಯ ಕರಡನ್ನು ಈಗಾಗಲೇ ಸಂಸದರಿಗೆ ವಿತರಿಸಲಾಗಿದೆ. ಪರೀಕ್ಷಾ ಅಕ್ರಮ ಹಾಗೂ ಸೋರಿಕೆಯಲ್ಲಿ ಭಾಗಿಯಾದವರಿಗೆ ಪ್ರಸ್ತುತ ಇರುವ 3 ವರ್ಷಗಳ ಜೈಲು ಶಿಕ್ಷೆಯನ್ನು 5 ರಿಂದ 10 ವರ್ಷಗಳಿಗೆ ಏರಿಸಲಾಗಿದೆ.
ಕೃತ್ಯದಲ್ಲಿ ಭಾಗಿಯಾದ ವ್ಯಕ್ತಿಗಳಿಗೆ ವಿಧಿಸುವ ಗರಿಷ್ಠ ದಂಡದ ಮೊತ್ತವನ್ನು 10 ಲಕ್ಷ ರೂ.ದಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಪರೀಕ್ಷೆ ಜವಾಬ್ದಾರಿ ಹೊತ್ತು ಕರ್ತವ್ಯಲೋಪ ಎಸಗುವ ಏಜೆನ್ಸಿಗಳಿಗೆ ವಿಧಿಸುವ ದಂಡವನ್ನು ಕೋಟಿಯಿಂದ 5 ಕೋಟಿ ರೂ. ಏರಿಸಲಾಗಿದ್ದು, ಅಂತಹ ಸಂಸ್ಥೆಗಳನ್ನು 8 ವರ್ಷಗಳ ಕಾಲ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ.
ಪರೀಕ್ಷಾ ಹಗರಣಗಳಲ್ಲಿ ಸಂಘಟಿತ ಅಪರಾಧವೆಂದು ಸಾಬೀತಾದರೆ 10 ಕೋಟಿ ರೂ. ವರೆಗೆ ದಂಡ ಮತ್ತು 7 ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಎಸ್ಟಿಎಫ್ (Sಖಿಈ) ಅಥವಾ ಯಾವುದೇ ಕೇಂದ್ರ ತನಿಖಾ ಸಂಸ್ಥೆಯು ಪರೀಕ್ಷಾ ಅಕ್ರಮದ ತನಿಖೆಯನ್ನು ಕೇವಲ 2 ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಕಾಲಮಿತಿ ನಿಗದಿಪಡಿಸಲಾಗಿದೆ.
ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಗಳಿAದ ನಡೆದ ತೀವ್ರ ಪ್ರತಿಭಟನೆಗಳು ಹಾಗೂ ಶಿಕ್ಷಣ ಸಚಿವರ ರಾಜೀನಾಮೆಗೆ ಕಾರಣವಾದ ಪರೀಕ್ಷಾ ಹಗರಣಗಳ ಬೆನ್ನಲ್ಲೇ ಸರ್ಕಾರ ಈ ಕಠಿಣ ಕಾನೂನು ರೂಪಿಸುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರಿಗೆ ಜಾಮೀನು ಸಿಗದಂತೆ ಕಠಿಣ ನಿಬಂಧನೆಗಳನ್ನು ತರಲು ಮತ್ತು ಯುವಕರ ಭವಿಷ್ಯದೊಂದಿಗೆ ಚೆಲ್ಲಾಟವಾಡುವವರಿಗೆ ತಕ್ಕ ಶಾಸ್ತಿ ಮಾಡಲು ಈ ಮಸೂದೆ ಅತ್ಯಂತ ನಿರ್ಣಾಯಕವಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
