ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಸುಹಾನಾ, ಹಿಂದೂ ಯುವಕ ಹರೀಶ್ ಗೌಡರನ್ನು ಪ್ರೀತಿಸಿ ಹಿಂದೂ ಸಂಪ್ರದಾಯದAತೆ ಮದುವೆಯಾಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿ ಪ್ರೀತಿಸುತ್ತಿದ್ದ ಜೋಡಿ, ಕಂಪ್ಯೂಟರ್ ತರಗತಿಗೆಂದು ಹೋಗಿದ್ದ ಸುಹಾನಾ ನಾಪತ್ತೆಯಾದ ನಂತರ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಾಜರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಯುವಕ ಹರೀಶ್ ಗೌಡನನ್ನು ಪ್ರೀತಿಸಿ ಸುಹಾನಾ ಮದುಮೆ ಮಾಡಿಕೊಂಡಿದ್ದಾರೆ. ಸ್ವಇಚ್ಛೆಯಿಂದ ಮದುವೆ ಆಗಿರುವುದಾಗಿ ಯುವತಿ ಹೇಳಿದ್ದಾಳೆ. ಫೇಸ್ಬುಕ್ನಲ್ಲಿ ಪರಿಚಯವಾಗಿ ಪ್ರೀತಿ ಮಾಡಿದ್ದರು. ಬಳಿಕ ಕಂಪ್ಯೂಟರ್ ಕ್ಲಾಸ್ಗೆಂದು ಹೋಗಿದ್ದವಳು ನಾಪತ್ತೆ ಆಗಿದ್ದಳು. ಯುವತಿ ಮನೆಯವರು ಮೂಡಬಿದರೆ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಿಸಿದ್ದರು. ಇದೀಗ ಪರಸ್ಪರ ಪ್ರೀತಿಸಿದ್ದ ಹರೀಶ್ ಗೌಡ-ಸುಹಾನಾ ಜೋಡಿ ಹಿಂದೂ ಸಂಪ್ರದಾಯದAತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ. ಬಳಿಕ ಜೋಡಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.