ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಪ್ರತೀ ವರ್ಷ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು CET ಮತ್ತು NEET ಪರೀಕ್ಷೆಯನ್ನು ಬರೆದು, ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣ ಪಡೆಯುವ ಮಹದಾಸೆ ಹೊಂದಿರುತ್ತಾರೆ.
ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ತಾಂತ್ರಿಕ ಹಾಗೂ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಎಬಿವಿಪಿ ಒತ್ತಾಯಿಸಿದೆ.
ಅನೇಕ ವರ್ಷಗಳಿಂದ ಎಬಿವಿಪಿ ಇದೇ ವಿಚಾರವಾಗಿ ಉನ್ನತ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿತ್ತು. ಕಳೆದ ಬಾರಿಯ ಸರಕಾರದಲ್ಲಿ ವೈದ್ಯಕೀಯ ಸಚಿವ ಡಾ| ಸುಧಾಕರ್ ಅವರಿಗೆ ಈ ಕುರಿತು ಮನವಿ ಸಲ್ಲಿಸಲಾಗಿತ್ತು. ಎಬಿವಿಪಿ ಮನವಿಗೆ ಸ್ಪಂದಿಸಿ ಪೂರಕವಾಗಿ ಸರಕಾರದಿಂದ ಉಳ್ಳೂರು ಭಾಗದಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸಲು 30 ಎಕರೆ ಜಮೀನನ್ನು ಮಂಜೂರಾತಿ ಮಾಡುವುದಾಗಿ ಭರವಸೆಯನ್ನು ನೀಡಿದ್ದರು ಆದರೆ ಇದುವರೆಗೆ ಆ ವಿಷಯವಾಗಿ ಯಾವುದೇ ರೀತಿಯ ಬೆಳವಣಿಗೆ ಆಗದೆ ಇರುವುದು ಬಹಳ ಖಂಡನಾರ್ಹ ವಿಷಯವಾಗಿದೆ. ಈಗಾಗಲೇ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಇಂತಹ ಕಾಲೇಜು ಇದ್ದು ಉಡುಪಿಯ ವಿದ್ಯಾರ್ಥಿಗಳಿಗಾಗಿ ಸರಕಾರ ಶೀಘ್ರವಾಗಿ ಮುಂದೆ ಬರುವ ಅಧಿವೇಶನದ ಸಂದರ್ಭದಲ್ಲಿ ಈ ವಿಷಯದ ಕುರಿತು ಸೂಕ್ತ ಜಮೀನಿನ ವ್ಯವಸ್ಥೆ ಹಾಗೂ ಹಣಕಾಸಿನ ಬಿಡುಗಡೆಯನ್ನು ಮಾಡಬೇಕು ಎಂದು ಎಬಿವಿಪಿ ಕಾರ್ಕಳ ತಹಶಿಲ್ದಾರ್ ನರಸಪ್ಪ ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಿದೆ.
ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ಶ್ರೇಯಸ್ ಅಂಚನ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಪವನ್ ಕುಲಾಲ್, ತಾಲೂಕು ವಿದ್ಯಾರ್ಥಿನಿ ಪ್ರಮುಖ್ ಸೌಮ್ಯ ನಾಯಕ್, ತಾಲೂಕು ಸಹ ವಿದ್ಯಾರ್ಥಿನಿ ಪ್ರಮುಖ್ ಮನ್ವಿತಾ ಕುಲಾಲ್, ನಗರ ಸಹ ಕಾರ್ಯದರ್ಶಿ ಯಾದ ದೀಕ್ಷಿತ್ ಹಾಗೂ ಪ್ರಮುಖ ಕಾರ್ಯಕರ್ತರಾದ ಮನೋಜ್,ವಿಜೇಂದ್ರ, ಯುವರಾಜ್, ಸುದೀಪ್, ತನುಶ್ರೀ, ಪ್ರಜ್ವಲ್, ಶಿವಪ್ರಸಾದ್,ಶ್ರೀಧರ್, ಮನ್ವಿತ್, ಶಿವಾನಂದ ರವರು ಉಪಸ್ಥಿತರಿದ್ದರು.











