Share this news

ಕಾರ್ಕಳ: ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ವೇಗವಾಗಿ ಬರುತ್ತಿದ್ದ ಗೂಡ್ಸ್ ವಾಹನ ಡಿಕ್ಕಿಯಾದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಶನಿವಾರ ಮುಂಜಾನೆ 7 ಗಂಟೆ ಸುಮಾರಿಗೆ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿ ಆಸೈ ತಂಬಿ(21) ಎಂದು ಗುರುತಿಸಲಾಗಿದೆ.
ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಅತಿವೇಗವಾಗಿ ಹೋಗುತ್ತಿದ್ದ ಕೊರಿಯರ್ ಕಂಪೆನಿಯ ಗೂಡ್ಸ್ ವಾಹನ ರಸ್ತೆ ಬಲಭಾಗಕ್ಕೆ ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಹುಬ್ಬಳ್ಳಿಯ ಹಾನಗಲ್ ಗೆ ಸಾಗುತ್ತಿದ್ದ ವಾಹನದ ಚಾಲಕನಿಗೆ ಮುಂಜಾನೆ ನಿದ್ದೆಗಣ್ಣಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಿಂದ ತೀವ್ರವಾಗಿ ಗಾಯಗೊಂಡ ಗಾಯಾಳುವನ್ನು ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ 108 ಸಿಬ್ಬಂದಿಗಳಾದ ಸ್ಟಾಫ್ ನರ್ಸ್ ದೇವಿಕಾ ಹಾಗೂ ಪೈಲಟ್ ಕಿಶೋರ್ ಕುಮಾರ್ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

 

Leave a Reply

Your email address will not be published. Required fields are marked *