ಅಜೆಕಾರು: ಸುಮಾರು 20 ವರ್ಷಗಳಿಂದ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಕಳೆದ 15 ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮರ್ಣೆ ಗ್ರಾಮದ ನಿವಾಸಿ ಸುಧಾಕರ (35) ಮೃತಪಟ್ಟವರು.
ಅವರು ಸುಮಾರು 15 ದಿನಗಳಿಂದ ಕುಡಿತದ ಚಟದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಅಜೆಕಾರಿನ ಕ್ಲಿನಿಕ್ ಒಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೂ. 28 ರಂದು ಮಾತನಾಡದೇ ಇದ್ದುದರಿಂದ ಅಜೆಕಾರು ಕ್ಲಿನಿಕ್ ನಲ್ಲಿ ಚಿಕಿತ್ಸೆ ಕೊಡಿಸಿ ನಂತರ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸುಧಾಕರ್ ಮೃತಪಟ್ಟಿದ್ದಾರೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.