Share this news

ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ 2024 ಡಿ.20 ರಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಕಪಾಟಿನಲ್ಲಿರಿಸಿದ್ದ ಚಿನ್ನಾಭರಣವನ್ನು ಕಳವುಗೈದು ಪರಾರಿಯಾಗಿದ್ದ ಪ್ರಕರಣ ದಾಖಲಾಗಿತ್ತು. ಇಏ ರೀತಿಯ ಕಳ್ಳತನ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಕಡೆ ಆಗುತ್ತಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಜಂಟಿ ಕಾರ್ಯಾಚರಣೆ ನಡೆಸಿ ಹಗಲು ಮನೆ ಕಳ್ಳ ತನ ನಡೆಸಿ ಯಾವುದೇ ಸುಳಿವು ನೀಡದೇ ಪರಾರಿಯಾಗುತ್ತಿದ್ದ ಆರೋಪಿಯನ್ನು ಅಪರಾಧ ಪತ್ತೆ ತಂಡ ಜ.10 ರಂದು ಕಳ್ಳತನಕ್ಕೆ ಉಪಯೋಗಿಸುತ್ತಿದ್ದ ಕಾರು ಸಹಿತ ವಶಕ್ಕೆ ಪಡೆದಿದ್ದಾರೆ.

ಕಾಸರಗೋಡು ಜಿಲ್ಲೆಯ ಉಪ್ಪಳ ಗುಡ್ಡೆಮನೆ ನಿವಾಸಿ, ಪ್ರಸ್ತುತ ಕಾಸರಗೋಡು ಮಂಜೇಶ್ವರ ಹೊಸಂಗಡಿ, ಮೂಡಂಬೈಲು, ನವಿಲು ಗಿರಿ ನಿವಾಸಿ ಸೂರಜ್ ಕೆ. (36 ವ.) ಬಂಧಿತ ಆರೋಪಿ.
ಆರೋಪಿಯು ಪುತ್ತೂರು ಗ್ರಾಮಾಂತರ ಠಾಣಾ ಸರಹದ್ದಿನ ಸರ್ವೆ ಗ್ರಾಮದ ಭಕ್ತಕೋಡಿ, ಈ ಹಿಂದೆ ಕಡಬ ಠಾಣಾ ಸರಹದ್ದಿನ ಅಲಂಗಾರು ಗ್ರಾಮದ ಕಲ್ಲೇರಿ, ಬಂಟ್ವಾಳ ಗ್ರಾಮಾಂತರ ಸರಹದ್ದಿನ ಇರಾ ಹಾಗೂ ವಿಟ್ಲ ಪೊಲೀಸ್ ಠಾಣಾ ಸರಹದ್ದಿನ ಕೊಲ್ನಾಡು ಗ್ರಾಮದ ಕುಂಟು ಕುಡೇಲು, ಮಂಕುಡೆ, ಕಾಡುಮಠ, ಇಡಿದು ಗ್ರಾಮದ ಅಳಕೆಮಜಲು ಕಡೆಗಳಲ್ಲಿ ಹಗಲು ಸಮಯ ಕಳವು ಮಾಡಿದ ಪ್ರಕರಣಗಳಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಇದೊAದು ವಿಶೇಷ ಪ್ರಕರಣ ಆಗಿದ್ದು, ಆರೋಪಿಯು ಕಳ್ಳತನ ಮಾಡಿ ಯಾವುದೇ ಸುಳಿವು ಸಿಗದೆ ಪರಾರಿಯಾಗುತ್ತಿದ್ದು, ಈ ಬಗ್ಗೆ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ಆರೋಪಿಯು ಕಳ್ಳತನ ಮಾಡಿದ್ದ ಒಟ್ಟು ಅಂದಾಜು ಮೌಲ್ಯ 18,00.000/ ರೂ. ಮೌಲ್ಯದ 200 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಮಾರುತಿ ಆಲ್ಲೊ ಕಾರು ಅಂದಾಜು ಮೌಲ್ಯ 3,00,000 ಒಟ್ಟು ರೂ. 21,00,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ಪತ್ತೆ ಬಗ್ಗೆ ಕಾರ್ಯಾಚರಣೆಯನ್ನು ದ.ಕ ಜಿಲ್ಲೆ ಅಧೀಕ್ಷಕರಾದ ಯತೀಶ್, ಎನ್ ಐ.ಪಿ.ಎಸ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜೇಂದ್ರ ಡಿ.ಎಸ್, ರವರ ಮಾರ್ಗದರ್ಶನದಂತೆ ಪುತ್ತೂರು ಪೊಲೀಸ್ ನಿರ್ದೇಶನದಂತೆ ಪುತ್ತೂರು ಗ್ರಾಮಾಂತರ ನಿರೀಕ್ಷಕರಾದ ರವಿ ಬಿ.ಎಸ್.ವಿಟ್ಲ. ಪೊಲೀಸ್ ನಿರೀಕ್ಷಕರಾದ ನಾಗರಾಜ್ ಹೆಚ್ ಇ.ರವರ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ಜಂಬೂರಾಜ್ ಬಿ ಮಹಾಜನ್, ಮಪಿಎಸ್ ಐ ಸುಷ್ಮಾ ಜಿ ಭಂಡಾರಿ, ಎಎಸ್‌ಐ ಮುರುಗೇಶ್, ಸಿಬ್ಬಂದಿಗಳಾದ ಉದಯ ರೈ, ರಾಧಾಕೃಷ್ಣ, ಪ್ರವೀಣ್ ರೈ ಪಾಲ್ತಾಡಿ, ಸ್ಕರಿಯ, ಅದ್ರಾಮ್, ಹರೀಶ್ ಗೌಡ, ಹರೀಶ್ಚಂದ್ರ, ಹರ್ಷಿತ್ ಗೌಡ, ಚಂದ್ರಶೇಖರ ಗೆಜ್ಜೆಳ್ಳಿ, ಶರಣಪ್ಪ ಪಾಟೇಲ್, ಶಂಕರ ಸಂಶಿ, ಗದಿಗಪ್ಪ, ವಿವೇಕ್, ಕುಮಾರ್ ಹೆಚ್., ನಾಗೇಶ್ ಕೆಸಿ, ಗಣಕಯಂತ್ರ ವಿಭಾಗದ ದಿವಾಕರ್, ಸಂಪತ್ ಚಾಲಕರಾದ ಎ.ಆರ್.ಎಸ್. ಐ ಯೋಗೇಶ್ ಹಾಗೂ ನಿತೇಶ್ ಕರ್ನೂರು ವಿಶೇಷ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ. ಪತ್ತೆ ತಂಡಕ್ಕೆ ಪೊಲೀಸ್ ಅಧೀಕ್ಷಕರು ವಿಶೇಷ ಬಹುಮಾನ ಘೋಷಿಸಿರುತ್ತಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *