Share this news

ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜೆಎಂಎಫ್​ಸಿ ಕೋರ್ಟ್​ನಿಂದ ಜಾಮೀನು ಮಂಜೂರಾಗಿದೆ. ಪ್ರಕರಣ ಸಂಬಂಧ ಅರುಣ್ ಕುಮಾರ್ ಪುತ್ತಿಲ ಸೋಮವಾರ ವಕೀಲರ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪುತ್ತಿಲ ಪರ ವಕೀಲರ ವಾದ ಪುರಸ್ಕರಿಸಿ ಜಾಮೀನು ನೀಡಿದೆ.

ಬೆಂಗಳೂರಿನ ಪೈ ವಿಸ್ತಾ ಹೋಟೆಲ್​​ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಅರುಣ್​ ಪುತ್ತಿಲ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ 47 ವರ್ಷದ ಮಹಿಳೆ ದೂರು ನೀಡಿದ್ದರು. ಫೋಟೋ, ಸೆಲ್ಫಿ ವಿಡಿಯೋ ತೋರಿಸಿ ಬ್ಲ್ಯಾಕ್​​​ಮೇಲ್​​​ ಮಾಡಿದ್ದಾಗಿ ಆರೋಪ ಮಾಡಿದ್ದರು. ಇದರ ಅನ್ವಯ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ ಸೆಕ್ಷನ್ 417, 354A, 506 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು.

2023 ಜೂನ್​ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ದೌರ್ಜನ್ಯ ನಡೆಸಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದರು.

                        

                          

                        

                       

Leave a Reply

Your email address will not be published. Required fields are marked *