ಮಂಗಳೂರು: ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿದ ಖದೀಮರು 30 ಲಕ್ಷ ರೂ. ಕದ್ದು ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಘಟನೆ ನಡೆದಿದೆ.
ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಎಂಬ ಹೆಸರಿನ ಸಂಸ್ಥೆಯನ್ನು ನಡೆಸುತ್ತಿದ್ದು, ತಡರಾತ್ರಿ ತಮಿಳುನಾಡು ಮೂಲದ ಖದೀಮರ ತಂಡ ಸುಲೈಮಾನ್ ಹಾಜಿ ಅವರ ಮನೆಗೆ ಬಂದು ನಾವು ಇಡಿ ಅಧಿಕಾರಿಗಳು ಎಂದು ಹಾಜಿ ಅವರನ್ನು ನಂಬಿಸಿ ಸುಮಾರು 2 ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಕೊನೆಗೆ ಮನೆಯಲ್ಲಿದ್ದ ಸುಮಾರು 30 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.