Share this news

ಬೆಳ್ತಂಗಡಿ: ಪೊಲೀಸರ ಆರ್‌ಎಎಫ್ [Rapid Action Force]ನ ಲಾರಿ ಮಗುಚಿ ಬಿದ್ದ ಘಟನೆ ಸೋಮವಾರ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ.

ಆರ್‌ಎಎಫ್‌ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ. ರೋಡ್‌ಗೆ ಬರುತ್ತಿದ್ದಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಮತ್ತೋರ್ವ ಸಿಬ್ಬಂಧಿ ಸಾಂತಪ್ಪ ನಾಯಕ್‌ ಅವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎಂದು ಪುಂಜಾಲಕಟ್ಟೆ ಪೊಲೀಸರು ತಿಳಿಸಿದ್ದಾರೆ. ಜಿ.ಪಂ. ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಸ್ಥಳಕ್ಕಾಗಮಿಸಿ ಕ್ರೇನ್‌ ತರಿಸಿ ಲಾರಿಯನ್ನು ಮೇಲೆತ್ತಲು ಸಹಕರಿಸಿದರು.

                       in 

                          

                        

                       

Leave a Reply

Your email address will not be published. Required fields are marked *