ಬೆಂಗಳೂರು: ದೆಹಲಿಯಲ್ಲಿ 2022ರ ಮೇ 18 ರಂದು ಶ್ರದ್ದಾ ವಾಕರ್ ಎಂಬ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಬಳಿಕ ಮೃತದೇಹವನ್ನು 35 ತುಂಡಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಇಟ್ಟು ನಂತರ ನಗರದ ಹಲವೆಡೆ ಮೃತ ದೇಹ ತುಂಡುಗಳನ್ನು ಎಸೆದಿದ್ದ ಪ್ರಕರಣದಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬಳನ್ನು ಹತ್ಯೆ ಮಾಡಿ ಬಳಿಕ ದೇಹವನ್ನು ಕತ್ತರಿಸಿ ಇದೇ ರೀತಿ ಫ್ರಿಡ್ಜ್ ನಲ್ಲಿ ತುಂಬಿಸಿ ಕೊಲೆಯೊಂದು ದೇಶವನ್ನೇ ಬೆಚ್ಚಿ ಬೀಳಿಸಿದೆ.
ಮಹಿಳೆಯ ಕೊಲೆಯ ಸುತ್ತ ಹಲವಾರು ಅನುಮಾನಗಳು ಹುಟ್ಟಿಕೊಂಡಿದ್ದು,
ವೈಯಾಲಿಕಾವಲ್ ನಲ್ಲಿ ನಡೆದಿರುವ ಮಹಾಲಕ್ಷ್ಮೀ ಎಂಬಾಕೆಯ ಭೀಕರ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿರೊ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಕೊಲೆ ರಹಸ್ಯ ಇನ್ನು ನಿಗೂಢವಾಗಿಯೇ ಉಳಿದಿದೆ. ಈ ಘಟನೆ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೃತಳ ತಾಯಿ ಸೀಮಾ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗ್ತಿದೆ.
ಭೀಕರವಾಗಿ ಕೊಲೆಯಾಗಿರುವ ಮಹಾಲಕ್ಷ್ಮಿ ಪರಸಂಗಕ್ಕೆ ಬಲಿಯಾದರೇ ಎಂಬ ಅನುಮಾನ ಹುಟ್ಟಿಕೊಂಡಿದೆ. ಮೆನ್ಸ್ ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿ ಜೊತೆ ಮೃತ ಮಹಾಲಕ್ಷ್ಮಿ ಸಲುಗೆ ಮತ್ತು ಆತ್ಮೀಯತೆ ಹೊಂದಿದ್ದಳು ಎನ್ನಲಾಗಿದೆ. ಆದರೆ ಕೆಲ ದಿನಗಳಿಂದ ಇಬ್ಬರ ಸಂಬಂಧದಲ್ಲಿ ಬಿರುಕು ಬಿಟ್ಟಿತ್ತು. ಹೀಗಾಗಿ ಮೆನ್ಸ್ ಪಾರ್ಲರ್ ವ್ಯಕ್ತಿಯ ಮೇಲೆ ಪೊಲೀಸರಿಗೆ ಅನುಮಾನ ಹುಟ್ಟಿಕೊಂಡಿದೆ. ಸದ್ಯ ನಾಪತ್ತೆಯಾಗಿರುವ ಮೆನ್ಸ್ ಪಾರ್ಲರ್ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ
ಮಹಾಲಕ್ಷ್ಮೀ ಬಾಡಿಗೆ ಮನೆಯಲ್ಲಿ ವಾಸವಿದ್ದು ಅವರು ನೇಪಾಳ ಮೂಲದವರು. ಇಡೀ ಕುಟುಂಬ ಹಲವು ವರ್ಷಗಳ ಹಿಂದೆಯೇ ನೆಲಮಂಗಲದಲ್ಲಿ ನೆಲೆಸಿದೆ. ಕಳೆದ ಐದು ತಿಂಗಳ ಹಿಂದೆ ನೆಲಮಂಗಲದಲ್ಲಿ ವಾಸವಿದ್ದ ಪತಿ ಜೊತೆ ಜಗಳ ಮಾಡಿಕೊಂಡಿದ್ದರು. ಪತಿ, ತಾಯಿ ನೆಲಮಂಗಲದಲ್ಲೇ ವಾಸವಿದ್ದಾರೆ, ಸೋದರಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂದು ಸ್ಥಳೀಯ ಕಿರಾಣಿ ಅಂಗಡಿ ಮಾಲಕ ಗಜೇಂದ್ರ ತಿಳಿಸಿದ್ದಾರೆ.
ಮಹಾಲಕ್ಷ್ಮಿ ಒಬ್ಬಳೇ ವಾಸವಿದ್ದ ಮನೆಗೆ ಆಗಾಗ ಯುವಕನೋರ್ವ ಬರುತ್ತಿದ್ದು ಆಕೆಯನ್ನು ಪಿಕ್ ಅಪ್ ಡ್ರಾಪ್ ಮಾಡಲು ಬರುತ್ತಿದ್ದ. ಬೆಳಗ್ಗೆ 9 ಗಂಟೆಗೆ ಮನೆಯಿಂದ ಕೆಲಸಕ್ಕೆ ತೆರಳ್ತಿದ್ದ ಮಹಾಲಕ್ಷ್ಮೀ, ಶೂರೂಂ ನಲ್ಲಿ ಕೆಲಸ ಮುಗಿಸಿ ಪ್ರತಿದಿನ ರಾತ್ರಿ 9 ಗಂಟೆಗೆ ಬರುತ್ತಿದ್ದಳು,ರಾತ್ರಿ ಮನೆಗೆ ಊಟಕ್ಕೆ ತೆರಳುವ ವೇಳೆ ನೂಡಲ್ಸ್, ಸ್ನ್ಯಾಕ್ಸ್ ಖರೀದಿಸಿ ತೆರಳ್ತಿದ್ದರು. ಕನ್ನಡ ಮತ್ತು ನೇಪಾಳಿ ಭಾಷೆಯನ್ನು ಆಕೆ ಮಾತನಾಡ್ತಿದ್ದರು. ಮಹಾಲಕ್ಷ್ಮೀ ವಾಸವಿದ್ದ ನೆರೆಮನೆಯವರು ಊರಿಗೆ ತೆರಳಿದ್ದರು, ನಿನ್ನೆ ಅವರು ವಾಪಾಸ್ ಆಗಿದ್ದರು. ಮಹಾಲಕ್ಷ್ಮೀ ಮನೆಯಿಂದ ದುರ್ವಾಸನೆ ಬರುತಿತ್ತು, ಹೀಗಾಗಿ ಅನುಮಾನ ಬಂದು ಮಹಾಲಕ್ಷ್ಮಿಗೆ ಕರೆ ಮಾಡಿದಾಗ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬಳಿಕ ಮಹಾಲಕ್ಷ್ಮೀ ಸೋದರಿ, ತಾಯಿಗೆ ಕರೆ ಮಾಡಿ ಸಂಪರ್ಕ ಮಾಡಿ ಕರೆಸಿಕೊಂಡಿದ್ದಾರೆ. ಆ ಬಳಿಕ ಫ್ರಿಡ್ಜ್ ನಲ್ಲಿ ಮೃತ ದೇಹದ ತುಂಡುಗಳು ಕತ್ತರಿಸಿಟ್ಟಿರುವುದು ಕಂಡು ಬಂದಿದೆ ಎಂದು ಗಜೇಂದ್ರ ಅವರು ತಿಳಿಸಿದ್ದಾರೆ.
in