Share this news

 

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬAಧಿಸಿದAತೆ ಇಂದು ಹೈಕೋರ್ಟ್ನಲ್ಲಿ ವಿಚಾರಣೆ ಮಾಡಲಾಗಿದೆ. ಸರ್ಕಾರದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೈಕೋರ್ಟ್ ತಿಳಿಸಿದ್ದು, ಯಾವುದೇ ನಿರ್ದೇಶನ ನೀಡದೇ ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ.

ಕಾಲ್ತುಳಿತದಲ್ಲಿ ಆರ್‌ಸಿಬಿಯ 11 ಅಭಿಮಾನಿಗಳ ಸಾವು ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ಹೋಗಿದ್ದಾರೆ. ಇತ್ತ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಯಾವುದೇ ನಿರ್ದೇಶನ ನೀಡದೇ ಅರ್ಜಿಗಳ ವಿಚಾರಣೆಯನ್ನು ಜೂ.12 ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

ದುರAತದ ಬಳಿಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತ್ತು. ಹಲವರಿಂದ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ವಿಚಾರಣೆಗೆ ಮನವಿ ಹಿನ್ನೆಲೆ ನ್ಯಾ.ವಿ.ಕಾಮೇಶ್ವರ ರಾವ್ ಮತ್ತು ನ್ಯಾ.ಸಿ.ಎಂ.ಜೋಶಿ ಅವರ ಪೀಠದಿಂದ ಇಂದು ವಿಚಾರಣೆ ಮಾಡಿದ್ದು, ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ತೀರ್ಮಾನ ನೀಡುವುದಾಗಿ ಹೇಳಿ ಜೂ.12 ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

 

 

 

 

 

Leave a Reply

Your email address will not be published. Required fields are marked *