ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಅಮಾನುಷ ಘಟನೆಯಾಗಿದೆ. ಇದನ್ನು ಪೋಲಿಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ. ಆದರೆ ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ನೋಡಿದರೆ ದುಷ್ಟರಿಗೆ ಹಾಗೂ ಹಿಂದೂ ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ದೊರೆಯುತ್ತಿರುವುದು ಸ್ಪಷ್ಟವಾಗಿದೆ, ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ ಎಂದು ಟೀಕಿಸಿದ್ದಾರೆ.