Share this news

 

 

ಕಾರ್ಕಳ:ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ತನಿಖೆ, ಬುರುಡೆ ಶೋಧದ ನೆಪದಲ್ಲಿ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ.
ನ್ಯಾಯದ ಪರ ಹೋರಾಟಗಳು ಹಾಗೂ ಸರ್ಕಾರದ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ ಇಡಬೇಕು. ಇಲ್ಲವಾದರೆ ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗಬಹುದು ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಎಚ್ಚರಿಸಿದ್ದಾರೆ.
ಧರ್ಮಸ್ಥಳ ವಿಚಾರದಲ್ಲಿ ಸರ್ಕಾರ ಏನು ಮಾಡುತ್ತಿದೆ ? ಇದೇನು ತನಿಖೆಯೋ ? ದೊಂಬಿಯೋ? ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ಯೋಜಿತ ಅಪಪ್ರಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಯೂಟ್ಯೂಬರ್ ಗಳು ಹಾಗೂ ಅನ್ಯಮತೀಯರ ಕೈಗೊಂಬೆಯಾಗಿ ಕುಣಿಯುತ್ತಿದೆಯೇ ?
ನಾಡಿನ ಪ್ರಮುಖ ಸುದ್ದಿ ವಾಹಿನಿಯ ಮೇಲೆ, ಸ್ಥಳೀಯ ನಾಗರಿಕರ ಮೇಲೆ ಈ ಹೋರಾಟಗಾರರ ಸೋಗಿನ ವ್ಯಕ್ತಿಗಳು ಹಲ್ಲೆ, ಗೂಂಡಾಗಿರಿ ಮಾಡುತ್ತಿದ್ದರೂ ಪೊಲೀಸ್ ಇಲಾಖೆ ಏನು ಮಾಡುತ್ತಿದೆ ? ಸಹನೆಗೂ ಒಂದು ಮಿತಿ ಇದೆ. ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ ಎಂದು ಸುನಿಲ್ ಸರ್ಕಾರವನ್ನು ಎಚ್ಚರಿಸಿದ್ದಾರೆ

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *