
ಕಾರ್ಕಳ, ನ.02: ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರ್ಕಳದ ಪಂಚಾಯತ್ರಾಜ್ ವಿಭಾಗದ ಇಂಜಿನಿಯರ್ ಸದಾನಂದ ನಾಯ್ಕ್ ಹಾಗೂ ಪತ್ನಿ ಮಗು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮೂರೂರು ಬಳಿ ಮಂಗಳವಾರ ಸಂಜೆ ಸಂಭವಿಸಿದೆ.
ಇAಜಿನಿಯರ್ ಸದಾನಂದ ನಾಯ್ಕ್ ಅವರು ತನ್ನ ಕಾರಿನಲ್ಲಿ ಪತ್ನಿ ಹಾಗೂ ಮಗುವಿನ ಜೊತೆ ತನ್ನ ಮನೆಯಾದ ಬ್ರಹ್ಮಾವರದ ಚಾಂತಾರಿಗೆ ಹೊರಟಿದ್ದರು. ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಮುರೂರು ಬಳಿ ಏಕಾಎಕಿ ವಾಹನ ಅಡ್ಡಬಂದ ಪರಿಣಾಮ ಕಾರು ನಿಯಂತ್ರಣ ತಪ್ಪಿ 33 ಕೆ.ವಿ ಹೈಟೆನ್ಷನ್ ಕಂಬಕ್ಕೆ ಡಿಕ್ಕಿಯಾಗಿದೆ. ಈ ಅಪಘಾತದಿಂದ ಸದಾನಂದ ನಾಯ್ಕ್ ಅವರಿಗೆ ಹಾಗೂ ಪತ್ನಿ,ಮಗುವಿಗೂ ಗಾಯಗಳಾಗಿದ್ದು ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

.
.
