ಬೆಂಗಳೂರು: ಕಾಂಗ್ರೆಸ್ ಆಡಳಿತದ ಕರ್ನಾಟಕದ ಪೊಲೀಸರು ಮಹಾತ್ಮ ಗಾಂಧೀಜಿಯವರ ಬಗ್ಗೆ ಮಹಾತ್ಮ ಗಾಂಧೀಜಿಯವರ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಸೆಹ್ರಾವತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಶನಿವಾರ ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಸೆಹ್ರಾವತ್ ಎಕ್ಸ್ ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಕರ್ನಾಟಕ ಪೊಲೀಸರು ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ನಾನು ರಾಷ್ಟ್ರಪಿತ ಎಂದು ಕರೆಯಲ್ಪಡುವ ಗಾಂಧೀಜಿ ಬಗ್ಗೆ ಕೆಲವು ಕಾಮೆಂಟ್ಗಳನ್ನು ಮಾಡಿದ್ದರಿಂದ ನನ್ನ ವಿರುದ್ಧ ಕೇಸ್ ದಾಖಲಿಸಲಾಗಿದೆ. ನಾನು ಗಾಂಧೀಜಿ ಬಗ್ಗೆ ಮಾತನಾಡಿದ್ದಕ್ಕೆ ಕೇಸ್ ದಾಖಲಿಸಿದ್ದಾರೆ. ಆದರೆ, ವೀರ ಸಾವರ್ಕರ್, ಭಗತ್ ಸಿಂಗ್, ಭಗವಾನ್ ಶ್ರೀಕೃಷ್ಣ ಮತ್ತು ಶ್ರೀರಾಮನಂತಹ ಹಿಂದೂ ಹೋರಾಟಗಾರರು ಮತ್ತು ಹಿಂದೂ ದೇವರುಗಳನ್ನು ನಿಂದಿಸುವವರ ವಿರುದ್ಧ ಎಂದಿಗೂ ಪ್ರಕರಣಗಳನ್ನು ದಾಖಲಿಸಲಾಗುವುದಿಲ್ಲ ಎಂದು ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಟೀಕಿಸಿದ್ದಾರೆ.